mathondu heluve
ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.
ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ.
‘ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಜೂನ್.13ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಯೂರ್.
‘ಮತೊಂದು ಹೇಳುವೆ’ ಚಿತ್ರದಲ್ಲಿ ಮಯೂರ್ ಕಡಿ, ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.
ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ‘ಮತೊಂದು ಹೇಳುವೆ’ ಚಿತ್ರ ನಿರ್ಮಾಣವಾಗಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…