mathondu heluve
ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.
ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ.
‘ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಜೂನ್.13ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಯೂರ್.
‘ಮತೊಂದು ಹೇಳುವೆ’ ಚಿತ್ರದಲ್ಲಿ ಮಯೂರ್ ಕಡಿ, ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.
ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ‘ಮತೊಂದು ಹೇಳುವೆ’ ಚಿತ್ರ ನಿರ್ಮಾಣವಾಗಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದಾರೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…