mathondu heluve
ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.
ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ.
‘ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಜೂನ್.13ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಯೂರ್.
‘ಮತೊಂದು ಹೇಳುವೆ’ ಚಿತ್ರದಲ್ಲಿ ಮಯೂರ್ ಕಡಿ, ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.
ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ‘ಮತೊಂದು ಹೇಳುವೆ’ ಚಿತ್ರ ನಿರ್ಮಾಣವಾಗಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…