mathondu heluve
ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.
ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ.
‘ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಜೂನ್.13ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಯೂರ್.
‘ಮತೊಂದು ಹೇಳುವೆ’ ಚಿತ್ರದಲ್ಲಿ ಮಯೂರ್ ಕಡಿ, ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.
ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ‘ಮತೊಂದು ಹೇಳುವೆ’ ಚಿತ್ರ ನಿರ್ಮಾಣವಾಗಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…