mathondu heluve
ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.
ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ.
‘ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಜೂನ್.13ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಯೂರ್.
‘ಮತೊಂದು ಹೇಳುವೆ’ ಚಿತ್ರದಲ್ಲಿ ಮಯೂರ್ ಕಡಿ, ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.
ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ‘ಮತೊಂದು ಹೇಳುವೆ’ ಚಿತ್ರ ನಿರ್ಮಾಣವಾಗಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…