ಮನರಂಜನೆ

ಕೊಲೆಯ ಹಿಂದೊಬ್ಬ ಮಾಯಾವಿ; ಸದ್ಯಕ್ಕೆ ಹಾಡು ಬಿಡುಗಡೆ

ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್‍, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು ಮತ್ತು ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

ಇಷ್ಟ ಎಂಟರ್ಟೈನರ್ಸ್ ಮೂಲಕ ನಿರ್ಮಾಣವಾಗಿರುವ ‘ಮಾಯಾವಿ’ ಚಿತ್ರಕ್ಕೆ ಶಂಕರ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಆವರಿಸು’ ಎಂಬ ಹಾಡು ಹಾಗೂ ಟೀಸರನ್ನು ಶ್ರೀ ಶಾಂತವೀರ ಮಹಾಸ್ವಾಮಿಗಳು ಹಾಗೂ ಶ್ರೀ ಈಶ್ವರಾನಂದಾಪುರಿ ಮಹಾಸ್ವಾಮಿಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿರುವ ಶಂಕರ್‍ಗೆ ಇದು ನಿರ್ದೇಶಕರಾಗಿ ಮೊದಲ ಚಿತ್ರ. ‘ಚಿತ್ರದುರ್ಗದಲ್ಲಿ ಕಥೆ ಕೇಳಿದ ಮಿತ್ರ ರಘುರಾಮ್ ಹಾಗೂ ಅವರ ಪತ್ನಿ ಅಕ್ಷತ ಚಿತ್ರ ನಿರ್ಮಾಣಕ್ಕೆ ಮುಂದಾದರು.‌ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಚಿತ್ರದುರ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ’ ಎಂದರು.

ರಘುರಾಮ್‍ ಮೂಲತಃ ಚಿತ್ರದುರ್ಗದವರಂತೆ. ‘ಈ ಚಿತ್ರ ನಿರ್ಮಾಣವಾಗಲು ಪ್ರಮುಖ ಕಾರಣ ನನ್ನ ಪತ್ನಿ ಡಾ. ಅಕ್ಷತ. ಅವರು ಮೂಲತಃ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ಶಂಕರ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಆನಂತರ ಚಿತ್ರಕ್ಕೆ ಚಾಲನೆ ದೊರೆಯಿತು. ಈ ಚಿತ್ರದ ಮೂಲಕ ಹೀರೋ ಆಗಬೇಕು ಎಂಬ ನನ್ನ ಕನಸು ನನಸಾಯಿತು’ ಎಂದರು. ಚಿತ್ರದಲ್ಲಿ ಪಾತ್ರವೇನು ಎಂಬ ಪ್ರಶ್ನೆಗೆ, ಅದು ಸಸ್ಪೆನ್ಸ್ ಎಂದಷ್ಟೇ ಹೇಳಿ ಸುಮ್ಮನಾದರು.

ನಾಯಕಿ ನಿಶ್ಚಿತ ಶೆಟ್ಟಿ ಇದಕ್ಕೂ ಮುನ್ನ ‘ಶ್ರೀ ಜಗನ್ನಾಥದಾಸರು’ ಚಿತ್ರದಲ್ಲಿ ನಟಿಸಿದ್ದರು. ಇದಲ್ಲದೆ ತೆಲುಗು ಚಿತ್ರಗಳಲ್ಲೂ ಅವರು ನಟಿಸಿದ್ದಾರಂತೆ. ‘’ಮಾಯಾವಿ’ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ನಟನೆಯ ಜೊತೆಗೆ ತಂತ್ರಜ್ಞಳಾಗಿಯೂ ಕಾರ್ಯ ನಿರ್ವಹಿಸಿದ್ದೇನೆ’ ಎಂದರು.

ಈ ಸಂದರ್ಭದಲ್ಲಿ ‘ಆವರಿಸು …’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡನ್ನು ಹಾಡಿದ್ದು, ಅಗಸ್ತ್ಯ ಸಂತೋಷ್ ಸಂಗೀತ ಸಂಯೋಜಿಸಿದ್ದಾರೆ‌. ಆನಂದ್ ಕಮ್ಮಸಾಗರ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago