ಮನರಂಜನೆ

ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍

ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್‍ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್‍ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍ ಆಗಿದ್ದಾರೆ. ಹಾಗಂತ ಅವರಿಗೆ ಯಾವುದೇ ವಿಶ್ವವಿದ್ಯಾಲಯವೂ ಗೌರವ ಡಾಕ್ಟರೇಟ್‍ ನೀಡಿಲ್ಲ. ಮೇಘನಾ, ಥೀಸಿಸ್‍ ಸಲ್ಲಿಸಿ ಡಾಕ್ಟರೇಟ್‍ ಪಡೆದಿದ್ದಾರೆ.

ಈ ಕುರಿತು ತಮ್ಮ ಸೋಷಿಯಲ್‍ ಮೀಡಿಯಾದ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಮೇಘನಾ, ತಮ್ಮ ಆರು ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಂದಹಾಗೆ, ‘ಸಿನಿಮಾ ಮತ್ತು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಮೇಘನಾ ಪಿಎಚ್‍ಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ನಿಮ್ಮೆಲ್ಲರ ಜೊತೆಗೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಳ್ಳಬೇಕು. ನಾನು ಮದುವೆಯಾಗುತ್ತಿಲ್ಲ. ಕಳೆದ ಆರು ವರ್ಷಗಳಿಂದ ಪಿಎಚ್‍ಡಿಗೆ ತಯಾರಿ ನಡೆಸಿದ್ದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನ್ನ ಥೀಸಿಸ್‍ ಕಳಿಸಿದೆ. ಕಳೆದ ವಾರ ನನ್ನ ವೈವಾ ಸಹ ಮುಗಿಯಿತು. ಈಗ ನನಗೆ ಡಾಕ್ಟರೇಟ್‍ ಸಿಕ್ಕಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಕ್ಕೆ ಇಷ್ಟಪಡುತ್ತೇನೆ. ಇದು ನನಗೆ ಬಹಳ ವಿಶೇಷವಾಗಿದ್ದು. ಏಕೆಂದರೆ, ಈ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ನಾನು ಮೊದಲು ಪಿಎಚ್‍ಡಿ ಮಾಡಬೇಕೆಂದು ತೀರ್ಮಾನಿಸಿದಾಗಿನಿಂದ, ಬಹಳಷ್ಟು ಜನ ನನ್ನನ್ನು ಪ್ರೋತ್ಸಾಹಿಸಿದ್ದಾರೆ. ಎಲ್ಲರಿಗೂ ನನ್ನ ಹೃದಯಪೂರ್ವಕವಾದ ಧನ್ಯವಾದಗಳು’ ಎಂದು ಹೇಳಿಕೊಂಡಿದ್ದಾರೆ.

‘ಸಿನಿಮಾ ಮತ್ತು ಸಾಹಿತ್ಯ’ ವಿಷಯ ಆಯ್ಕೆ ಮಾಡಿಕೊಂಡಿರುವ ಕುರಿತು ಮಾತನಾಡಿರುವ ಮೇಘನಾ, ‘ಇದು ನನ್ನ ಹೃದಯಕ್ಕೆ ಹತ್ತಿರವಾದ ವಿಷಯ.’ ಎಂದು ತಿಳಿಸಿದ್ದಾರೆ.

ಇನ್ನು, ಈ ಪಿಎಚ್‍ಡಿ ಪದವಿಯರನ್ನು ತಂದೆಗೆ ಅರ್ಪಿಸಿರುವ ಮೇಘನಾ, ‘ಈ ಪಿಎಚ್‍ಡಿ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಇದು ಅವರ ಕನಸು. ನಾನು ಪಿಎಚ್‍ಡಿ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಆ ಆಸೆ ಈಗ ಪೂರೈಸಿದೆ’ ಎಂದಿದ್ದಾರೆ.

ವೀಡಿಯೋ ಜೊತೆಗೆ ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ಫೋಟೋವನ್ನು ಮೇಘನಾ ಗಾಂವ್ಕರ್ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

11 mins ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

23 mins ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

28 mins ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

33 mins ago

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

40 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

2 hours ago