ಮನರಂಜನೆ

ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍

ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್‍ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್‍ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍ ಆಗಿದ್ದಾರೆ. ಹಾಗಂತ ಅವರಿಗೆ ಯಾವುದೇ ವಿಶ್ವವಿದ್ಯಾಲಯವೂ ಗೌರವ ಡಾಕ್ಟರೇಟ್‍ ನೀಡಿಲ್ಲ. ಮೇಘನಾ, ಥೀಸಿಸ್‍ ಸಲ್ಲಿಸಿ ಡಾಕ್ಟರೇಟ್‍ ಪಡೆದಿದ್ದಾರೆ.

ಈ ಕುರಿತು ತಮ್ಮ ಸೋಷಿಯಲ್‍ ಮೀಡಿಯಾದ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಮೇಘನಾ, ತಮ್ಮ ಆರು ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಂದಹಾಗೆ, ‘ಸಿನಿಮಾ ಮತ್ತು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಮೇಘನಾ ಪಿಎಚ್‍ಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ನಿಮ್ಮೆಲ್ಲರ ಜೊತೆಗೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಳ್ಳಬೇಕು. ನಾನು ಮದುವೆಯಾಗುತ್ತಿಲ್ಲ. ಕಳೆದ ಆರು ವರ್ಷಗಳಿಂದ ಪಿಎಚ್‍ಡಿಗೆ ತಯಾರಿ ನಡೆಸಿದ್ದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನ್ನ ಥೀಸಿಸ್‍ ಕಳಿಸಿದೆ. ಕಳೆದ ವಾರ ನನ್ನ ವೈವಾ ಸಹ ಮುಗಿಯಿತು. ಈಗ ನನಗೆ ಡಾಕ್ಟರೇಟ್‍ ಸಿಕ್ಕಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಕ್ಕೆ ಇಷ್ಟಪಡುತ್ತೇನೆ. ಇದು ನನಗೆ ಬಹಳ ವಿಶೇಷವಾಗಿದ್ದು. ಏಕೆಂದರೆ, ಈ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ನಾನು ಮೊದಲು ಪಿಎಚ್‍ಡಿ ಮಾಡಬೇಕೆಂದು ತೀರ್ಮಾನಿಸಿದಾಗಿನಿಂದ, ಬಹಳಷ್ಟು ಜನ ನನ್ನನ್ನು ಪ್ರೋತ್ಸಾಹಿಸಿದ್ದಾರೆ. ಎಲ್ಲರಿಗೂ ನನ್ನ ಹೃದಯಪೂರ್ವಕವಾದ ಧನ್ಯವಾದಗಳು’ ಎಂದು ಹೇಳಿಕೊಂಡಿದ್ದಾರೆ.

‘ಸಿನಿಮಾ ಮತ್ತು ಸಾಹಿತ್ಯ’ ವಿಷಯ ಆಯ್ಕೆ ಮಾಡಿಕೊಂಡಿರುವ ಕುರಿತು ಮಾತನಾಡಿರುವ ಮೇಘನಾ, ‘ಇದು ನನ್ನ ಹೃದಯಕ್ಕೆ ಹತ್ತಿರವಾದ ವಿಷಯ.’ ಎಂದು ತಿಳಿಸಿದ್ದಾರೆ.

ಇನ್ನು, ಈ ಪಿಎಚ್‍ಡಿ ಪದವಿಯರನ್ನು ತಂದೆಗೆ ಅರ್ಪಿಸಿರುವ ಮೇಘನಾ, ‘ಈ ಪಿಎಚ್‍ಡಿ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಇದು ಅವರ ಕನಸು. ನಾನು ಪಿಎಚ್‍ಡಿ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಆ ಆಸೆ ಈಗ ಪೂರೈಸಿದೆ’ ಎಂದಿದ್ದಾರೆ.

ವೀಡಿಯೋ ಜೊತೆಗೆ ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ಫೋಟೋವನ್ನು ಮೇಘನಾ ಗಾಂವ್ಕರ್ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

17 mins ago

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…

47 mins ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…

1 hour ago

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…

2 hours ago

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

2 hours ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

2 hours ago