ಮನರಂಜನೆ

ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍

ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್‍ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್‍ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍ ಆಗಿದ್ದಾರೆ. ಹಾಗಂತ ಅವರಿಗೆ ಯಾವುದೇ ವಿಶ್ವವಿದ್ಯಾಲಯವೂ ಗೌರವ ಡಾಕ್ಟರೇಟ್‍ ನೀಡಿಲ್ಲ. ಮೇಘನಾ, ಥೀಸಿಸ್‍ ಸಲ್ಲಿಸಿ ಡಾಕ್ಟರೇಟ್‍ ಪಡೆದಿದ್ದಾರೆ.

ಈ ಕುರಿತು ತಮ್ಮ ಸೋಷಿಯಲ್‍ ಮೀಡಿಯಾದ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಮೇಘನಾ, ತಮ್ಮ ಆರು ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಂದಹಾಗೆ, ‘ಸಿನಿಮಾ ಮತ್ತು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಮೇಘನಾ ಪಿಎಚ್‍ಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ನಿಮ್ಮೆಲ್ಲರ ಜೊತೆಗೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಳ್ಳಬೇಕು. ನಾನು ಮದುವೆಯಾಗುತ್ತಿಲ್ಲ. ಕಳೆದ ಆರು ವರ್ಷಗಳಿಂದ ಪಿಎಚ್‍ಡಿಗೆ ತಯಾರಿ ನಡೆಸಿದ್ದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನ್ನ ಥೀಸಿಸ್‍ ಕಳಿಸಿದೆ. ಕಳೆದ ವಾರ ನನ್ನ ವೈವಾ ಸಹ ಮುಗಿಯಿತು. ಈಗ ನನಗೆ ಡಾಕ್ಟರೇಟ್‍ ಸಿಕ್ಕಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಕ್ಕೆ ಇಷ್ಟಪಡುತ್ತೇನೆ. ಇದು ನನಗೆ ಬಹಳ ವಿಶೇಷವಾಗಿದ್ದು. ಏಕೆಂದರೆ, ಈ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ನಾನು ಮೊದಲು ಪಿಎಚ್‍ಡಿ ಮಾಡಬೇಕೆಂದು ತೀರ್ಮಾನಿಸಿದಾಗಿನಿಂದ, ಬಹಳಷ್ಟು ಜನ ನನ್ನನ್ನು ಪ್ರೋತ್ಸಾಹಿಸಿದ್ದಾರೆ. ಎಲ್ಲರಿಗೂ ನನ್ನ ಹೃದಯಪೂರ್ವಕವಾದ ಧನ್ಯವಾದಗಳು’ ಎಂದು ಹೇಳಿಕೊಂಡಿದ್ದಾರೆ.

‘ಸಿನಿಮಾ ಮತ್ತು ಸಾಹಿತ್ಯ’ ವಿಷಯ ಆಯ್ಕೆ ಮಾಡಿಕೊಂಡಿರುವ ಕುರಿತು ಮಾತನಾಡಿರುವ ಮೇಘನಾ, ‘ಇದು ನನ್ನ ಹೃದಯಕ್ಕೆ ಹತ್ತಿರವಾದ ವಿಷಯ.’ ಎಂದು ತಿಳಿಸಿದ್ದಾರೆ.

ಇನ್ನು, ಈ ಪಿಎಚ್‍ಡಿ ಪದವಿಯರನ್ನು ತಂದೆಗೆ ಅರ್ಪಿಸಿರುವ ಮೇಘನಾ, ‘ಈ ಪಿಎಚ್‍ಡಿ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಇದು ಅವರ ಕನಸು. ನಾನು ಪಿಎಚ್‍ಡಿ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಆ ಆಸೆ ಈಗ ಪೂರೈಸಿದೆ’ ಎಂದಿದ್ದಾರೆ.

ವೀಡಿಯೋ ಜೊತೆಗೆ ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ಫೋಟೋವನ್ನು ಮೇಘನಾ ಗಾಂವ್ಕರ್ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

20 hours ago