ಮನರಂಜನೆ

ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍

ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್‍ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್‍ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍ ಆಗಿದ್ದಾರೆ. ಹಾಗಂತ ಅವರಿಗೆ ಯಾವುದೇ ವಿಶ್ವವಿದ್ಯಾಲಯವೂ ಗೌರವ ಡಾಕ್ಟರೇಟ್‍ ನೀಡಿಲ್ಲ. ಮೇಘನಾ, ಥೀಸಿಸ್‍ ಸಲ್ಲಿಸಿ ಡಾಕ್ಟರೇಟ್‍ ಪಡೆದಿದ್ದಾರೆ.

ಈ ಕುರಿತು ತಮ್ಮ ಸೋಷಿಯಲ್‍ ಮೀಡಿಯಾದ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಮೇಘನಾ, ತಮ್ಮ ಆರು ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಂದಹಾಗೆ, ‘ಸಿನಿಮಾ ಮತ್ತು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಮೇಘನಾ ಪಿಎಚ್‍ಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ನಿಮ್ಮೆಲ್ಲರ ಜೊತೆಗೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಳ್ಳಬೇಕು. ನಾನು ಮದುವೆಯಾಗುತ್ತಿಲ್ಲ. ಕಳೆದ ಆರು ವರ್ಷಗಳಿಂದ ಪಿಎಚ್‍ಡಿಗೆ ತಯಾರಿ ನಡೆಸಿದ್ದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನ್ನ ಥೀಸಿಸ್‍ ಕಳಿಸಿದೆ. ಕಳೆದ ವಾರ ನನ್ನ ವೈವಾ ಸಹ ಮುಗಿಯಿತು. ಈಗ ನನಗೆ ಡಾಕ್ಟರೇಟ್‍ ಸಿಕ್ಕಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಕ್ಕೆ ಇಷ್ಟಪಡುತ್ತೇನೆ. ಇದು ನನಗೆ ಬಹಳ ವಿಶೇಷವಾಗಿದ್ದು. ಏಕೆಂದರೆ, ಈ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ನಾನು ಮೊದಲು ಪಿಎಚ್‍ಡಿ ಮಾಡಬೇಕೆಂದು ತೀರ್ಮಾನಿಸಿದಾಗಿನಿಂದ, ಬಹಳಷ್ಟು ಜನ ನನ್ನನ್ನು ಪ್ರೋತ್ಸಾಹಿಸಿದ್ದಾರೆ. ಎಲ್ಲರಿಗೂ ನನ್ನ ಹೃದಯಪೂರ್ವಕವಾದ ಧನ್ಯವಾದಗಳು’ ಎಂದು ಹೇಳಿಕೊಂಡಿದ್ದಾರೆ.

‘ಸಿನಿಮಾ ಮತ್ತು ಸಾಹಿತ್ಯ’ ವಿಷಯ ಆಯ್ಕೆ ಮಾಡಿಕೊಂಡಿರುವ ಕುರಿತು ಮಾತನಾಡಿರುವ ಮೇಘನಾ, ‘ಇದು ನನ್ನ ಹೃದಯಕ್ಕೆ ಹತ್ತಿರವಾದ ವಿಷಯ.’ ಎಂದು ತಿಳಿಸಿದ್ದಾರೆ.

ಇನ್ನು, ಈ ಪಿಎಚ್‍ಡಿ ಪದವಿಯರನ್ನು ತಂದೆಗೆ ಅರ್ಪಿಸಿರುವ ಮೇಘನಾ, ‘ಈ ಪಿಎಚ್‍ಡಿ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಇದು ಅವರ ಕನಸು. ನಾನು ಪಿಎಚ್‍ಡಿ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಆ ಆಸೆ ಈಗ ಪೂರೈಸಿದೆ’ ಎಂದಿದ್ದಾರೆ.

ವೀಡಿಯೋ ಜೊತೆಗೆ ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ಫೋಟೋವನ್ನು ಮೇಘನಾ ಗಾಂವ್ಕರ್ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

4 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

14 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

19 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

19 hours ago