ಮನರಂಜನೆ

13 ವರ್ಷಗಳ ನಂತರ ತಮಿಳು ಸಿನಿಮಾಗೆ ಎಂಟ್ರಿ ಕೊಟ್ಟಾ ಮೇಘನಾ ರಾಜ್‌

ರಜನಿಕಾಂತ್‍ ಅಭಿನಯದ ‘ಜೈಲರ್ 2’ ಚಿತ್ರದಲ್ಲಿ ಶಿವರಾಜಕುಮಾರ್ ‍ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವೇ. ಈಗ ಆ ಚಿತ್ರದಲ್ಲಿ ಕನ್ನಡದ ಮೇಘನಾ ರಾಜ್‍ ಸಹ ನಟಿಸುತ್ತಿರುವ ಸುದ್ದಿ ಬಂದಿದೆ.

ಮೇಘನಾ ರಾಜ್‍, ತಮಿಳಿನಲ್ಲಿ ನಟಿಸುತ್ತಿರುವುದು ಹೊಸದೇನಲ್ಲ. ಸುಮಾರು 15 ವರ್ಷಗಳ ಹಿಂದೆಯೇ ಅವರು ‘ಕಾದಲ್‍ ಸೊಲ್ಲ ವಂದೇನನ್‍’, ‘ಉಯರತಿರರು 420’ ಮತ್ತು ‘ನಂದ ನಂದಿತ’ ಚಿತ್ರಗಳಲ್ಲಿ ನಟಿಸಿದ್ದರು. 2012ರಲ್ಲಿ ಬಿಡುಗಡೆಯಾದ ‘ನಂದ ನಂದಿತ’ ನಂತರ ಅವರು ಯಾವುದೇ ತಮಿಳು ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ‘ಜೈಲರ್ 2’ ಚಿತ್ರದ ಮೂಲಕ ಅವರು ಕಾಲಿವುಡ್‍ಗೆ ವಾಪಸ್ಸಾಗಿದ್ದಾರೆ.

ಇದನ್ನು ಓದಿ: ‘ಮಾರ್ನಮಿ’ ಟ್ರೇಲರ್‍ಗೆ ಸುದೀಪ್‍ ಧ್ವನಿ: ನ.28ಕ್ಕೆ ಚಿತ್ರ ಬಿಡುಗಡೆ

‘ಜೈಲರ್ 2’ ಚಿತ್ರವು 2026ರ ಜೂನ್‍.12ರಂದು ಬಿಡುಗಡೆಯಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಎಸ್.ಜೆ. ಸೂರ್ಯ, ರಮ್ಯಾ ಕೃಷ್ಣ, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದು, ಕನ್ನಡದ ಶಿವರಾಜಕುಮಾರ್, ಹಿಂದಿಯ ಮಿಥುನ್‍ ಚಕ್ರವರ್ತಿ, ತೆಲುಗಿನ ನಂದಮೂರಿ ಬಾಲಕೃಷ್ಣ, ಮಲಯಾಳಂನ ಮೋಹನ್‍ ಲಾಲ್‍ ಈ ಚಿತ್ರದಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಜೈಲರ್ 2’ ಚಿತ್ರವು 2023ರಲ್ಲಿ ಬಿಡುಗಡೆಯಾದ ‘ಜೈಲರ್’ ಚಿತ್ರದ ಮುಂದಿನ ಭಾಗವಾಗಿದ್ದು, ಈ ಚಿತ್ರಕ್ಕೆ ನೆಲ್ಸನ್‍ ದಿಲೀಪ್‍ ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದರೆ, ಸನ್‍ ಪಿಕ್ಚರ್ಸ್‌ನ ಕಲಾನಿಧಿ ಮಾರನ್‍ ನಿರ್ಮಾಣ ಮಾಡುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago