ಮನರಂಜನೆ

‘ಕುಂಟೆಬಿಲ್ಲೆ’ ಆಡಲು ಬಂದ ಮೇಘಶ್ರೀ; ಸೆ. 26ಕ್ಕೆ ಚಿತ್ರ ಬಿಡುಗಡೆ

‘ಕೃಷ್ಣ ತುಳಸಿ’, ‘ಕದ್ದುಮುಚ್ಚಿ’, ‘ಮನಸಾಗಿದೆ’, ‘ರಿದಮ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ನಾಯಕಿಯಾಗಿ ನಟಿಸಿದ್ದ ಮೇಘಶ್ರೀ, ಒಂದು ಸಣ್ಣ ಗ್ಯಾಪ್‍ನ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಅವರು ‘ಕುಂಟೆಬಿಲ್ಲೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಹಿಂದೆ ‘ದಕ್ಷಯಜ್ಞ’ ಮತ್ತು ‘ತರ್ಲೆ ವಿಲೇಜ್‍’ ಚಿತ್ರಗಳನ್ನು ನಿರ್ದೇಶಿಸಿದ್ದ ಮೈಸೂರಿನ ಮೂಲದ ಜಿ.ಬಿ.ಎಸ್‍. ಸಿದ್ಧೇಗೌಡ, ಈಗ ಮತ್ತೊಂದು ಗ್ರಾಮೀಣ ಸೊಗಡಿನ ಕಥೆಯೊಂದನ್ನು ಸಿನಿಮಾ ಮಾಡಿದ್ದಾರೆ. ‘ಕುಂಟೆಬಿಲ್ಲೆ’ ಚಿತ್ರಕ್ಕೆ ಅವರು ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದು, ಯದು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ಮೇಘಶ್ರೀ ನಟಿಸಿದ್ದಾರೆ. ಸುಚೇಂದ್ರ ಪ್ರಸಾದ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಶಂಕರ ಅಶ್ವಥ್, ಬಲ ರಾಜವಾಡಿ, ಭವಾನಿ ಪ್ರಕಾಶ್ ಮೊದಲಾದವರು ಅಭಿನಯಿಸಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ಸಿದ್ದೇಗೌಡ, ‘ನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ‌. ಅದೇ ಶೀರ್ಷಿಕೆ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಈ ಹಳ್ಳಿಯ ಸೊಗಡಿನ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದೇವೆ. ಇದು ಪ್ರೀತಿ, ಸಸ್ಪೆನ್ಸ್ ಅಂಶಗಳಿರುವ ಚಿತ್ರ. ನಮ್ಮ ಕೈಯಾರೆ ನಾವೇ ನಮ್ಮ ಪ್ರೀತಿಯನ್ನು ಹೇಗೆ ಹಾಳು ಮಾಡಿಕೊಳ್ಳುತ್ತೇವೆ ಎಂಬುದರ ಸುತ್ತ ಕಥೆ ಸಾಗುತ್ತದೆ’ ಎಂದರು.

ಇದನ್ನು ಓದಿ : ‘ಕಾಂತಾರ ಅಧ್ಯಾಯ 1’ ಕನ್ನಡದ ಟ್ರೇಲರ್ ಕನ್ನಡ ಕಲಾಭಿಮಾನಿಗಳಿಂದಲೇ ಬಿಡುಗಡೆ

ನಾಯಕ ಯದು ಅವರ ತಂದೆ ಕುಮಾರ್ ಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. 30 ವರ್ಷದ ಹಿಂದೆ ಅವರು ಕಲಾವಿದನಾಗಬೇಕು ಎಂದು ಬೆಂಗಳೂರಿಗೆ ಬಂದಿದ್ದರಂತೆ. ಆದರೆ, ಅದು ಸಾಧ್ಯವಾಗಲಿಲ್ಲ. ಈಗ ತಮ್ಮ ಆಸೆಯನ್ನು ಮಗನ ಮೂಲಕ ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ‘ನನ್ನ ತಂದೆಯವರ ಆಸೆ ಈಡೇರಿಸುವ ಸಲುವಾಗಿ ನಾನಿಂದು ಈ ಕ್ಷೇತ್ರಕ್ಕೆ ಬಂದಿದ್ದೇನೆ’ ಎಂದ ಯದು, ನನಗೆ ಕ್ರಿಕೆಟ್ ಆಟಗಾರನಾಗಬೇಕೆನ್ನುವ ಆಸೆ ಹೊಂದಿದ್ದೆ. ಅದಕ್ಕಾಗಿ ತರಬೇತಿ ಸಹ ಪಡೆಯುತ್ತಿದ್ದೆ.ಆದರೆ, ತಂದೆಯವರ ಆಸೆ ಈಡೇರಿಸುವುದಕ್ಕಾಗಿ ಅದನ್ನು ಅರ್ಧಕ್ಕೇ ಬಿಟ್ಟುಬಂದೆ. ನಾನು ರಂಗಭೂಮಿಯ ತರಬೇತಿ ಪಡೆದಿದ್ದು, ಈ ಚಿತ್ರದಲ್ಲಿ ಒಬ್ಬ ಕೋಳಿ ಫಾರಂನಲ್ಲಿ ಕೆಲಸ ಮಾಡುವ ಯುವಕನಾಗಿ ಕಾಣಿಸಿಕೊಂಡಿದ್ದೇನೆ. ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಅವನೇನು ಮಾಡುತ್ತಾನೆ ಎನ್ನುವುದು ಚಿತ್ರದ ಕಥಾ ಕಥೆ’ ಎಂದರು.

ನಾಯಕ ನಟಿ ಮೇಘಶ್ರೀ ಮಾತನಾಡಿ, ‘ನನ್ನ ಪಾತ್ರ ಬಹಳ ಬೋಲ್ಡ್ ಆಗಿದೆ. ಇಂತಹಾ ಪಾತ್ರ ಮಾಡುವುದು ಸುಲಭವಲ್ಲ. ಇದು ವಿಶೇಷ ಕಥೆ ಹಾಗೂ ಪಾತ್ರವಾಗಿರುವುದರಿಂದಲೇ ನಾನು ಈ ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡೆ. ಇಡೀ ಕಥೆಯೇ ನನ್ನ ಪಾತ್ರದ ಸುತ್ತ ನಡೆಯುತ್ತದೆ. ನನ್ನ ಪಾತ್ರಕ್ಕೆ ವಿಶೇಷ ಮಹತ್ವವಿದೆ. ಅದೊಂದು ವಿಶೇಷ ದೃಶ್ಯವಿದ್ದು, ಅದನ್ನು ನೋಡಿದರೆ ಪ್ರೇಕ್ಷಕರು ಬೆಚ್ಚಿಬೀಳುತ್ತಾರೆ. ಅಂತಹ ವಿಶೇಷ ಕಥೆ ಇರುವ ಸಿನಿಮಾ ಇದು. ನಾನು ಈ ಚಿತ್ರದಲ್ಲಿ ಕುಂಟೆಬಿಲ್ಲೆ, ವಾಲಿಬಾಲ್ ಸೇರಿ ವಿವುಧ ಆಟಗಳನ್ನು ಆಡಿದ್ದೇನೆ’ ಎಂದು ಹೇಳಿದರು.

‘ಕುಂಟೆಬಿಲ್ಲೆ’ ಚಿತ್ರಕ್ಕೆ ಹರಿಕಾವ್ಯ ಸಂಗೀತ ಮತ್ತು ಮುಂಜಾನೆ ಮಂಜು ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago