ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ MJ (ಮಂಜುನಾಥ್ ಜಯರಾಜ್) ಇದೀಗ ಸದ್ದಿಲ್ಲದೆ ಒಂದು ಚಿತ್ರಕ್ಕೆ ಹೀರೋ ಆಗುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಚಿತ್ರ ಇದೀಗ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ‘ದೈವ’ ಚಿತ್ರದ ಟೀಸರನ್ನು ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ‘ಭರ್ಜರಿ’ ಚೇತನ್, ಜಡೇಶ್ ಕೆ. ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ. ವಿಶ್ವನಾಥ್ ಜೊತೆಯಾಗಿ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಚಿತ್ರದ ಕುರಿತು ಮಾತನಾಡುವ ಮಂಜುನಾಥ್ ಜಯರಾಜ್, ‘’ದೈವ’ ಎಂದ ಕೂಡಲೇ ಇದು ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಒಂದು ಕಮರ್ಷಿಯಲ್ ಸಿನಿಮಾ. ಇದೊಂದು ಪಕ್ಕಾ ದೇಸಿ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ ಮತ್ತು ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್ಗಳಲ್ಲಿ ನಾನು ಅಭಿನಯಿಸಿದ್ದೇನೆ. ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಸದ್ಯದಲ್ಲೇ ಮೊದಲ ಕಾಪಿ ಬರಲಿದೆ. ನಮ್ಮ ತಾಯಿ ಜಯಮ್ಮ ಪದ್ಮರಾಜ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ’ ಎಂದರು.
‘ದೈವ’ ಚಿತ್ರದಲ್ಲಿ ಸುರಭಿ, ನೀತು ರಾಯ್, ಬಲ ರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ವಿಜೇತ್ ಮಂಜಯ್ಯ ಮತ್ತು ಸಿದ್ಧಾರ್ಥ್ ಅವರ ಛಾಯಾಗ್ರಹಣವಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…