ಮನರಂಜನೆ

‘ದೈವ’ದ ಮೊರೆ ಹೋದ MJ: ಐವರು ನಿರ್ದೇಶಕರಿಂದ ಟೀಸರ್ ಬಿಡುಗಡೆ

ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಅಸಿಸ್ಟೆಂಟ್‍ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ MJ (ಮಂಜುನಾಥ್ ಜಯರಾಜ್) ಇದೀಗ ಸದ್ದಿಲ್ಲದೆ ಒಂದು ಚಿತ್ರಕ್ಕೆ ಹೀರೋ ಆಗುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಚಿತ್ರ ಇದೀಗ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ‘ದೈವ’ ಚಿತ್ರದ ಟೀಸರನ್ನು ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ‘ಭರ್ಜರಿ’ ಚೇತನ್, ಜಡೇಶ್ ಕೆ. ಹಂಪಿ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ. ವಿಶ್ವನಾಥ್ ಜೊತೆಯಾಗಿ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಚಿತ್ರದ ಕುರಿತು ಮಾತನಾಡುವ ಮಂಜುನಾಥ್‍ ಜಯರಾಜ್‍, ‘’ದೈವ’ ಎಂದ ಕೂಡಲೇ ಇದು ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಒಂದು ಕಮರ್ಷಿಯಲ್ ಸಿನಿಮಾ. ಇದೊಂದು ಪಕ್ಕಾ ದೇಸಿ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ ಮತ್ತು ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್‍ಗಳಲ್ಲಿ ನಾನು ಅಭಿನಯಿಸಿದ್ದೇನೆ. ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಸದ್ಯದಲ್ಲೇ ಮೊದಲ ಕಾಪಿ ಬರಲಿದೆ. ನಮ್ಮ ತಾಯಿ ಜಯಮ್ಮ ಪದ್ಮರಾಜ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ’ ಎಂದರು.

‘ದೈವ’ ಚಿತ್ರದಲ್ಲಿ ಸುರಭಿ, ನೀತು ರಾಯ್, ಬಲ ರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ವಿಜೇತ್‍ ಮಂಜಯ್ಯ ಮತ್ತು ಸಿದ್ಧಾರ್ಥ್‍ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

10 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

11 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

11 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

12 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

13 hours ago