ಮನರಂಜನೆ

ಮತ್ತೆ ಬಂದ ‘ಮೊನಾಲಿಸಾ’ ಜೋಡಿ; ಕಾರಣ ಏನು ಗೊತ್ತಾ?

ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ಚಿತ್ರಗಳ ಬಗ್ಗೆ ಯಶಸ್ವಿಯಾದ ಚಿತ್ರವೆಂದರೆ ಅದು ‘ಮೊನಾಲಿಸಾ’. 20 ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರ ಸಾಕಷ್ಟು ಯಶಸ್ವಿಯಾಗಿತ್ತು. ಈಗ ಆ ಚಿತ್ರದಲ್ಲಿ ನಟಿಸಿದ ಧ್ಯಾನ್‍ ಮತ್ತು ಸದಾ ಅವರನ್ನು ಇಂದ್ರಜಿತ್‍ ಮತ್ತೊಮ್ಮೆ ಬೆಂಗಳೂರಿಗೆ ಕರೆಸಿದ್ದಾರೆ. ಅವರಿಬ್ಬರನ್ನು ಇಟ್ಟುಕೊಂಡು ‘ಮೊನಾಲಿಸಾ’ ಮಾಡುವ ಯೋಚನೆ ಏನಾದರೂ ಇದೆಯಾ? ಎಂಬ ಪ್ರಶ್ನೆ ಬರಬಹುದು.

ಅಂದಹಾಗೆ, ಧ್ಯಾನ್‍ ಮತ್ತು ಸದಾ ಅವರನ್ನು ಇಂದ್ರಜಿತ್‍ ಬೆಂಗಳೂರಿಗೆ ಕರೆಸಿದ್ದು, ಅದೇ ‘ಮೊನಾಲಿಸಾ’ ಚಿತ್ರದ 20ನೇ ವಾರ್ಷಿಕೋತ್ಸವಕ್ಕೆ. ಇಂದ್ರಜಿತ್‍ ನಿರ್ದೇಶನದ ಹೊಸ ಚಿತ್ರ ‘ಗೌರಿ’ ಚಿತ್ರದ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ‘ಮುದ್ದಾದ’ ಎಂಬ ಹೊಸ ಹಾಡನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಹಾಡು ಬಿಡುಗಡೆ ಮತ್ತು ‘ಮೊನಾಲಿಸಾ’ ಚಿತ್ರದ 20ನೇ ವಾರ್ಷಿಕೋತ್ಸವವನ್ನು ಒಂದೇ ವೇದಿಕೆಯಲ್ಲಿ ಆಚರಿಸಿದರು ಇಂದ್ರಜಿತ್‍.

ಈ ಸಮಾರಂಭಕ್ಕೆ ಸದಾ ಮತ್ತು ಧ್ಯಾನ್‍ ಇಬ್ಬರೂ ಬಂದಿದ್ದರು. ಜೊತೆಗೆ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶರಣ್ ಸಹ ಇದ್ದರು. ಜೊತೆಗೆ ‘ನಾದಬ್ರಹ್ಮ’ ಹಂಸಲೇಖ ಇದ್ದರು. ಅವರೆಲ್ಲರ ಸಮ್ಮುಖದಲ್ಲಿ ಚಿತ್ರದ ಹಾಡು ಬಿಡುಗಡೆಯಾಯಿತು.

‘ಮುದ್ದಾದ ನಿನ್ನ ಹೆಸರೇನು’ ಎಂದು ಶುರುವಾಗುವ ಈ ಹಾಡಿನಲ್ಲಿ ಸಮರ್ಜಿತ್‍ ಲಂಕೇಶ್‍ ಮತ್ತು ಸಾನ್ಯ ಅಯ್ಯರ್‍ ಕಾಣಿಸಿಕೊಂಡಿದ್ದಾರೆ. ಜಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದು, ಕವಿರಾಜ್ ಹಾಡು ಬರೆದಿದ್ದಾರೆ. ಇನ್ನು, ನಿಹಾಲ್‍ ತೌರೋ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಹಿಂದೊಮ್ಮೆ ಕನ್ನಡದಲ್ಲಿ ಯಶಸ್ವಿ ಹೀರೋ ಆಗಿದ್ದ ಸಮೀರ್ ದತ್ತಾನಿ ಅಲಿಯಾಸ್‍ ಧ್ಯಾನ್‍, ಕನ್ನಡದಲ್ಲಿ ‘ನನ್ನ ಪ್ರೀತಿಯ ಹುಡುಗಿ’, ‘ಜೂಟಾಟ’, ‘ಅಮೃತಧಾರೆ’, ‘ನೀನೇ ನೀನೇ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ‘ಲವ್‍ ಯೂ ಆಲಿಯಾ’ದಲ್ಲೊಂದು ಅತಿಥಿ ಪಾತ್ರದ ನಂತರ ಅವರು ಕನ್ನಡದಲ್ಲಿ ಯಾವೊಂದು ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಅದೇ ರೀತಿ ಸದಾ ಸಹ ‘ಆರಕ್ಷಕ್’ ಚಿತ್ರದ ನಂತರ ಯಾವೊಂದು ಕನ್ನಡ ಚಿತ್ರದಲ್ಲೂ ನಟಿಸಿರಲಿಲ್ಲ. ಈಗ ಬಹಳ ವರ್ಷಗಳ ನಂತರ ಅವರಿಬ್ಬರೂ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ.

‘ಗೌರಿ’ ಚಿತ್ರವು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಚಿತ್ರದಲ್ಲಿ ಇಂದ್ರಜಿತ್‍ ಮಗ ಸಮರ್ಜಿತ್ ನಾಯಕನಾಗಿ ಕಾಣಿಸಿಕೊಂಡರೆ, ಸಾನ್ಯಾ ಅಯ್ಯರ್‍ ನಾಯಕಿಯಾಗಿದ್ದಾರೆ. ಜೊತೆಗೆ ಮಿಕ್ಕಂತೆ ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ‘ಕಾಂತಾರ’ ಖ್ಯಾತಿಯ ಮಾಲತಿ ಸುಧೀರ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

7 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

7 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

8 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

8 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

8 hours ago