ಮನರಂಜನೆ

ಮತ್ತೆ ಬಂದ ‘ಮೊನಾಲಿಸಾ’ ಜೋಡಿ; ಕಾರಣ ಏನು ಗೊತ್ತಾ?

ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ಚಿತ್ರಗಳ ಬಗ್ಗೆ ಯಶಸ್ವಿಯಾದ ಚಿತ್ರವೆಂದರೆ ಅದು ‘ಮೊನಾಲಿಸಾ’. 20 ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರ ಸಾಕಷ್ಟು ಯಶಸ್ವಿಯಾಗಿತ್ತು. ಈಗ ಆ ಚಿತ್ರದಲ್ಲಿ ನಟಿಸಿದ ಧ್ಯಾನ್‍ ಮತ್ತು ಸದಾ ಅವರನ್ನು ಇಂದ್ರಜಿತ್‍ ಮತ್ತೊಮ್ಮೆ ಬೆಂಗಳೂರಿಗೆ ಕರೆಸಿದ್ದಾರೆ. ಅವರಿಬ್ಬರನ್ನು ಇಟ್ಟುಕೊಂಡು ‘ಮೊನಾಲಿಸಾ’ ಮಾಡುವ ಯೋಚನೆ ಏನಾದರೂ ಇದೆಯಾ? ಎಂಬ ಪ್ರಶ್ನೆ ಬರಬಹುದು.

ಅಂದಹಾಗೆ, ಧ್ಯಾನ್‍ ಮತ್ತು ಸದಾ ಅವರನ್ನು ಇಂದ್ರಜಿತ್‍ ಬೆಂಗಳೂರಿಗೆ ಕರೆಸಿದ್ದು, ಅದೇ ‘ಮೊನಾಲಿಸಾ’ ಚಿತ್ರದ 20ನೇ ವಾರ್ಷಿಕೋತ್ಸವಕ್ಕೆ. ಇಂದ್ರಜಿತ್‍ ನಿರ್ದೇಶನದ ಹೊಸ ಚಿತ್ರ ‘ಗೌರಿ’ ಚಿತ್ರದ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ‘ಮುದ್ದಾದ’ ಎಂಬ ಹೊಸ ಹಾಡನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಹಾಡು ಬಿಡುಗಡೆ ಮತ್ತು ‘ಮೊನಾಲಿಸಾ’ ಚಿತ್ರದ 20ನೇ ವಾರ್ಷಿಕೋತ್ಸವವನ್ನು ಒಂದೇ ವೇದಿಕೆಯಲ್ಲಿ ಆಚರಿಸಿದರು ಇಂದ್ರಜಿತ್‍.

ಈ ಸಮಾರಂಭಕ್ಕೆ ಸದಾ ಮತ್ತು ಧ್ಯಾನ್‍ ಇಬ್ಬರೂ ಬಂದಿದ್ದರು. ಜೊತೆಗೆ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶರಣ್ ಸಹ ಇದ್ದರು. ಜೊತೆಗೆ ‘ನಾದಬ್ರಹ್ಮ’ ಹಂಸಲೇಖ ಇದ್ದರು. ಅವರೆಲ್ಲರ ಸಮ್ಮುಖದಲ್ಲಿ ಚಿತ್ರದ ಹಾಡು ಬಿಡುಗಡೆಯಾಯಿತು.

‘ಮುದ್ದಾದ ನಿನ್ನ ಹೆಸರೇನು’ ಎಂದು ಶುರುವಾಗುವ ಈ ಹಾಡಿನಲ್ಲಿ ಸಮರ್ಜಿತ್‍ ಲಂಕೇಶ್‍ ಮತ್ತು ಸಾನ್ಯ ಅಯ್ಯರ್‍ ಕಾಣಿಸಿಕೊಂಡಿದ್ದಾರೆ. ಜಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದು, ಕವಿರಾಜ್ ಹಾಡು ಬರೆದಿದ್ದಾರೆ. ಇನ್ನು, ನಿಹಾಲ್‍ ತೌರೋ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಹಿಂದೊಮ್ಮೆ ಕನ್ನಡದಲ್ಲಿ ಯಶಸ್ವಿ ಹೀರೋ ಆಗಿದ್ದ ಸಮೀರ್ ದತ್ತಾನಿ ಅಲಿಯಾಸ್‍ ಧ್ಯಾನ್‍, ಕನ್ನಡದಲ್ಲಿ ‘ನನ್ನ ಪ್ರೀತಿಯ ಹುಡುಗಿ’, ‘ಜೂಟಾಟ’, ‘ಅಮೃತಧಾರೆ’, ‘ನೀನೇ ನೀನೇ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ‘ಲವ್‍ ಯೂ ಆಲಿಯಾ’ದಲ್ಲೊಂದು ಅತಿಥಿ ಪಾತ್ರದ ನಂತರ ಅವರು ಕನ್ನಡದಲ್ಲಿ ಯಾವೊಂದು ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಅದೇ ರೀತಿ ಸದಾ ಸಹ ‘ಆರಕ್ಷಕ್’ ಚಿತ್ರದ ನಂತರ ಯಾವೊಂದು ಕನ್ನಡ ಚಿತ್ರದಲ್ಲೂ ನಟಿಸಿರಲಿಲ್ಲ. ಈಗ ಬಹಳ ವರ್ಷಗಳ ನಂತರ ಅವರಿಬ್ಬರೂ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ.

‘ಗೌರಿ’ ಚಿತ್ರವು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಚಿತ್ರದಲ್ಲಿ ಇಂದ್ರಜಿತ್‍ ಮಗ ಸಮರ್ಜಿತ್ ನಾಯಕನಾಗಿ ಕಾಣಿಸಿಕೊಂಡರೆ, ಸಾನ್ಯಾ ಅಯ್ಯರ್‍ ನಾಯಕಿಯಾಗಿದ್ದಾರೆ. ಜೊತೆಗೆ ಮಿಕ್ಕಂತೆ ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ‘ಕಾಂತಾರ’ ಖ್ಯಾತಿಯ ಮಾಲತಿ ಸುಧೀರ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago