‘ದುನಿಯಾ’ ವಿಜಯ್ ಮಗಳು ಮೋನಿಕಾ ಈ ವರ್ಷದ ಏಪ್ರಿಲ್ನಲ್ಲಿ ಪ್ರಾರಂಭವಾದ ‘ಪ್ರೊಡಕ್ಷನ್ ನಂ 2’ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಿತನ್ಯಾ ಹೆಸರಿನಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವುದಕ್ಕೆ ಮುಂದಾಗಿದ್ದರು. ಆಗಲೇ ವಿಜಯ್, ತಮ್ಮ ಇನ್ನೊಬ್ಬ ಮಗಳು ಮೋನಿಷಾ ಸಹ ಚಿತ್ರರಂಗಕ್ಕೆ ಬರುತ್ತಾಳೆ ಎಂದು ಹೇಳಿದ್ದರು.
ಅದೀಗ ನಿಜವಾಗಿದೆ. ವಿಜಯ್ ಮಗಳು ಮೋನಿಷಾ, ಇದೀಗ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ರಿತನ್ಯಾ ಅವರನ್ನು ಜಡೇಶ್ ಹಂಪಿ, ತಮ್ಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಆದರೆ, ಮೋನಿಷಾ ಅವರನ್ನು ವಿಜಯ್ ಅವರೇ ಪರಿಚಯಿಸುತ್ತಿದ್ದಾರೆ. ‘ಸಿಟಿ ಲೈಟ್ಸ್’ ಚಿತ್ರವನ್ನು ಅವರೇ ನಿರ್ದೇಶನ ಮಾಡುತ್ತಿದ್ದಾರೆ.
ಒಂದು ಬ್ಯುಸಿ ರಸ್ತೆಯಲ್ಲಿ ಮೋನಿಷಾ ನಡೆದು ಬರುತ್ತಿರುವ ಪೋಸ್ಟರ್ ಇದಾಗಿದೆ. ಯಾವುದೋ ಯೋಚನೆಯಲ್ಲಿ ಕಳೆದು ಹೋಗಿರುವ ಮಧ್ಯಮ ವರ್ಗದ ಹುಡುಗಿಯಾಗಿ ಮೋನಿಷಾ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರ ಪಾತ್ರವೇನು? ಚಿತ್ರದ ಕಥೆಯೇನು? ಮುಂತಾದ ಯಾವುದೇ ವಿಷಯವನ್ನು ಸದ್ಯಕ್ಕೆ ಬಹಿರಂಗೊಳಿಸಲಾಗಿಲ್ಲ.
ಅಷ್ಟೇ ಅಲ್ಲ, ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಎಂಬ ವಿಷಯವನ್ನೂ ವಿಜಯ್ ಹೊರಹಾಕಿಲ್ಲ. ಸದ್ಯಕ್ಕೆ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.
ಸದ್ಯ ‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಯಶಸ್ವಿ ಪ್ರದರ್ಶನ ಕಂಡಿದ್ದು, ಇತ್ತೀಚೆಗೆ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆ ಆಗಿದೆ. ಈ ಮಧ್ಯೆ, ‘ದುನಿಯಾ’ ವಿಜಯ್ ಅಭಿನಯದ ಹೊಸ ಚಿತ್ರ ಘೋಷಣೆಯಾಗಿದೆ. ಇದು ಅವರ ಅಭಿನಯದ 30ನೇ ಚಿತ್ರವಾಗಿದ್ದು, ಈ ಚಿತ್ರವನ್ನು ಅವರ ಶಿಷ್ಯ ವೆಟ್ರಿವೇಲ್ ಅಲಿಯಾಸ್ ತಂಬಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಘೋಷಣೆ ಇತ್ತೀಚೆಗೆ ಅಧಿಕೃತವಾಗಿ ಆಗಿದ್ದು, ಹೊಸ ಪೋಸ್ಟರ್ ಸಹ ಬಿಡುಗಡೆ ಆಗಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…