ಮನರಂಜನೆ

‘ದುನಿಯಾ’ ವಿಜಯ್‍ ಮತ್ತೊಬ್ಬ ಮಗಳೂ ಅಭಿನಯಕ್ಕೆ; ‘ಸಿಟಿ ಲೈಟ್ಸ್’ ಚಿತ್ರದಲ್ಲಿ ನಟನೆ

‘ದುನಿಯಾ’ ವಿಜಯ್ ಮಗಳು ಮೋನಿಕಾ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ‘ಪ್ರೊಡಕ್ಷನ್ ನಂ 2’ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಿತನ್ಯಾ ಹೆಸರಿನಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವುದಕ್ಕೆ ಮುಂದಾಗಿದ್ದರು. ಆಗಲೇ ವಿಜಯ್‍, ತಮ್ಮ ಇನ್ನೊಬ್ಬ ಮಗಳು ಮೋನಿಷಾ ಸಹ ಚಿತ್ರರಂಗಕ್ಕೆ ಬರುತ್ತಾಳೆ ಎಂದು ಹೇಳಿದ್ದರು.

ಅದೀಗ ನಿಜವಾಗಿದೆ. ವಿಜಯ್‍ ಮಗಳು ಮೋನಿಷಾ, ಇದೀಗ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದೆ. ರಿತನ್ಯಾ ಅವರನ್ನು ಜಡೇಶ್ ಹಂಪಿ, ತಮ್ಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಆದರೆ, ಮೋನಿಷಾ ಅವರನ್ನು ವಿಜಯ್‍ ಅವರೇ ಪರಿಚಯಿಸುತ್ತಿದ್ದಾರೆ. ‘ಸಿಟಿ ಲೈಟ್ಸ್’ ಚಿತ್ರವನ್ನು ಅವರೇ ನಿರ್ದೇಶನ ಮಾಡುತ್ತಿದ್ದಾರೆ.

ಒಂದು ಬ್ಯುಸಿ ರಸ್ತೆಯಲ್ಲಿ ಮೋನಿಷಾ ನಡೆದು ಬರುತ್ತಿರುವ ಪೋಸ್ಟರ್‍ ಇದಾಗಿದೆ. ಯಾವುದೋ ಯೋಚನೆಯಲ್ಲಿ ಕಳೆದು ಹೋಗಿರುವ ಮಧ್ಯಮ ವರ್ಗದ ಹುಡುಗಿಯಾಗಿ ಮೋನಿಷಾ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರ ಪಾತ್ರವೇನು? ಚಿತ್ರದ ಕಥೆಯೇನು? ಮುಂತಾದ ಯಾವುದೇ ವಿಷಯವನ್ನು ಸದ್ಯಕ್ಕೆ ಬಹಿರಂಗೊಳಿಸಲಾಗಿಲ್ಲ.

ಅಷ್ಟೇ ಅಲ್ಲ, ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಎಂಬ ವಿಷಯವನ್ನೂ ವಿಜಯ್‍ ಹೊರಹಾಕಿಲ್ಲ. ಸದ್ಯಕ್ಕೆ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.

ಸದ್ಯ ‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಯಶಸ್ವಿ ಪ್ರದರ್ಶನ ಕಂಡಿದ್ದು, ಇತ್ತೀಚೆಗೆ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆ ಆಗಿದೆ. ಈ ಮಧ್ಯೆ, ‘ದುನಿಯಾ’ ವಿಜಯ್‍ ಅಭಿನಯದ ಹೊಸ ಚಿತ್ರ ಘೋಷಣೆಯಾಗಿದೆ. ಇದು ಅವರ ಅಭಿನಯದ 30ನೇ ಚಿತ್ರವಾಗಿದ್ದು, ಈ ಚಿತ್ರವನ್ನು ಅವರ ಶಿಷ್ಯ ವೆಟ್ರಿವೇಲ್‍ ಅಲಿಯಾಸ್‍ ತಂಬಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಘೋಷಣೆ ಇತ್ತೀಚೆಗೆ ಅಧಿಕೃತವಾಗಿ ಆಗಿದ್ದು, ಹೊಸ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

ಭೂಮಿಕಾ

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago