ಮನರಂಜನೆ

‘ದುನಿಯಾ’ ವಿಜಯ್‍ ಮತ್ತೊಬ್ಬ ಮಗಳೂ ಅಭಿನಯಕ್ಕೆ; ‘ಸಿಟಿ ಲೈಟ್ಸ್’ ಚಿತ್ರದಲ್ಲಿ ನಟನೆ

‘ದುನಿಯಾ’ ವಿಜಯ್ ಮಗಳು ಮೋನಿಕಾ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ‘ಪ್ರೊಡಕ್ಷನ್ ನಂ 2’ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಿತನ್ಯಾ ಹೆಸರಿನಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವುದಕ್ಕೆ ಮುಂದಾಗಿದ್ದರು. ಆಗಲೇ ವಿಜಯ್‍, ತಮ್ಮ ಇನ್ನೊಬ್ಬ ಮಗಳು ಮೋನಿಷಾ ಸಹ ಚಿತ್ರರಂಗಕ್ಕೆ ಬರುತ್ತಾಳೆ ಎಂದು ಹೇಳಿದ್ದರು.

ಅದೀಗ ನಿಜವಾಗಿದೆ. ವಿಜಯ್‍ ಮಗಳು ಮೋನಿಷಾ, ಇದೀಗ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದೆ. ರಿತನ್ಯಾ ಅವರನ್ನು ಜಡೇಶ್ ಹಂಪಿ, ತಮ್ಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಆದರೆ, ಮೋನಿಷಾ ಅವರನ್ನು ವಿಜಯ್‍ ಅವರೇ ಪರಿಚಯಿಸುತ್ತಿದ್ದಾರೆ. ‘ಸಿಟಿ ಲೈಟ್ಸ್’ ಚಿತ್ರವನ್ನು ಅವರೇ ನಿರ್ದೇಶನ ಮಾಡುತ್ತಿದ್ದಾರೆ.

ಒಂದು ಬ್ಯುಸಿ ರಸ್ತೆಯಲ್ಲಿ ಮೋನಿಷಾ ನಡೆದು ಬರುತ್ತಿರುವ ಪೋಸ್ಟರ್‍ ಇದಾಗಿದೆ. ಯಾವುದೋ ಯೋಚನೆಯಲ್ಲಿ ಕಳೆದು ಹೋಗಿರುವ ಮಧ್ಯಮ ವರ್ಗದ ಹುಡುಗಿಯಾಗಿ ಮೋನಿಷಾ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರ ಪಾತ್ರವೇನು? ಚಿತ್ರದ ಕಥೆಯೇನು? ಮುಂತಾದ ಯಾವುದೇ ವಿಷಯವನ್ನು ಸದ್ಯಕ್ಕೆ ಬಹಿರಂಗೊಳಿಸಲಾಗಿಲ್ಲ.

ಅಷ್ಟೇ ಅಲ್ಲ, ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಎಂಬ ವಿಷಯವನ್ನೂ ವಿಜಯ್‍ ಹೊರಹಾಕಿಲ್ಲ. ಸದ್ಯಕ್ಕೆ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.

ಸದ್ಯ ‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಯಶಸ್ವಿ ಪ್ರದರ್ಶನ ಕಂಡಿದ್ದು, ಇತ್ತೀಚೆಗೆ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆ ಆಗಿದೆ. ಈ ಮಧ್ಯೆ, ‘ದುನಿಯಾ’ ವಿಜಯ್‍ ಅಭಿನಯದ ಹೊಸ ಚಿತ್ರ ಘೋಷಣೆಯಾಗಿದೆ. ಇದು ಅವರ ಅಭಿನಯದ 30ನೇ ಚಿತ್ರವಾಗಿದ್ದು, ಈ ಚಿತ್ರವನ್ನು ಅವರ ಶಿಷ್ಯ ವೆಟ್ರಿವೇಲ್‍ ಅಲಿಯಾಸ್‍ ತಂಬಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಘೋಷಣೆ ಇತ್ತೀಚೆಗೆ ಅಧಿಕೃತವಾಗಿ ಆಗಿದ್ದು, ಹೊಸ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

ಭೂಮಿಕಾ

Recent Posts

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

27 mins ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

2 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

6 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

7 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

13 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

13 hours ago