ಮನರಂಜನೆ

ಜೀವನ ಪಯಣದ ಸುತ್ತ ‘ಕಾವೇರಿ ತೀರದಲ್ಲಿ ಮುಂಗಾರಿದೆ’

ಥ್ರಿಲ್ಲರ್ ಮಂಜು ಅಭಿನಯದ ‘ಮುಗಿಲ ಮಲ್ಲಿಗೆ’ ಚಿತ್ರವನ್ನು ನಿರ್ದೇಶಿಸಿರುವ ಆರ್‍.ಕೆ. ಗಾಂಧಿ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ‘ಮುಗಿಲ ಮಲ್ಲಿಗೆ’ ಚಿತ್ರದ ಬಿಡುಗಡೆಗೂ ಮೊದಲೇ ಈ ಚಿತ್ರ ಪ್ರಾರಂಭವಾಗಲಿದ್ದು, ಚಿತ್ರಕ್ಕೆ ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಎಂಬ ಹೆಸರು ಇಡಲಾಗಿದೆ.

ಕನ್ನಡದಲ್ಲಿ ಇದಕ್ಕೂ ಮೊದಲು ‘ಕಾವೇರಿ ತೀರದಲ್ಲಿ’ ಎಂಬ ಚಿತ್ರ ಬಿಡುಗಡೆ ಆಗಿತ್ತು. ಇನ್ನು, ‘ಮುಂಗಾರು’ ಹೆಸರಿನ ಕೆಲವು ಚಿತ್ರಗಳು ಬಿಡುಗಡೆಯಾಗಿವೆ. ಈಗ ‘ಕಾವೇರಿ ತೀರದಲ್ಲಿ ಮುಂಗಾರು’ ಎಂಬ ಚಿತ್ರವನ್ನು ಆರ್‍.ಕೆ. ಗಾಂಧಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ಮನುಷ್ಯನ ಜೀವನ ಅನ್ನೋದು ಒಂದು ಸಮುದ್ರದ ತೀರದಂತೆ. ಅದು ಕೆಲವೊಮ್ಮೆ ಪ್ರಶಾಂತವಾಗಿ ಸಾಗುತ್ತಿದ್ದರೆ, ಮತ್ತೆ ಕೆಲವೊಮ್ಮೆ ಬೋರ್ಗೆರೆಯುವ ಅಲೆಗಳಿಂದ ಬದುಕನ್ನು ಎದುರಿಸಬೇಕಾಗುತ್ತದೆ. ಯಾವಾಗ ಪ್ರಶಾಂತವಾಗಿ ಸಾಗುತ್ತದೆ, ಯಾವಾಗ ತನ್ನ ದಿಕ್ಕನ್ನು ವಿರುದ್ಧವಾಗಿ ಬದಲಿಸಿಕೊಂಡುಬಿಡುತ್ತದೆ ಅನ್ನೋದನ್ನು ಯಾರಿಂದಲೂ ಸಹ ಊಹಿಸಲು ಸಾಧ್ಯವಾಗುವುದಿಲ್ಲ ಎಂಬ ಎಳೆ ಇಟ್ಟುಕೊಂಡು ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಕಥೆ ಮಾಡಲಾಗುತ್ತಿದೆ.

ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ನವೀನ್ ಕುಮಾರ್ ಗೌಡ, ಗೋಪಾಲ್ ಸ್ವಾಮಿ, ಹಾಗು ವಸಂತ ನಾಯಕ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಬಾಗಲಕೋಟೆ ಜಿಲ್ಲೆಯ ತೇರದಾಳ ಮೂಲದ ಉದಯ್ ಹಾಗೂ ಕನ್ನಡದಲ್ಲಿ ‘ಮಗಳೇ’, ‘ಅಸುರರು’ ಚಿತ್ರಗಳಲ್ಲಿ ನಟಿಸಿದ್ದ ಸುಪ್ರಿತಾ ರಾಜ್ ಈ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ.

‘ಕಾವೇರಿ ತೀರದಲ್ಲಿ ಮುಂಗಾರಿದೆ’ ಚಿತ್ರಕ್ಕೆ ಗಂಧರ್ವ ರಾಯ್ ರಾವುತ್ ಸಂಗೀತ ಮತ್ತು ನಾಗೇಂದ್ರ ಕುಮಾರ್ ಎಂ ಅವರ ಛಾಯಾಗ್ರಹಣವಿದೆ. ಚಿತ್ರದ ಚಿತ್ರೀಕರಣ ಏಪ್ರಿಲ್ 25 ರಿಂದ ಪ್ರಾರಂಭವಾಗಲಿದ್ದು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹೊಸಪೇಟೆ, ಬಾಗಲಕೋಟೆ ಹಾಗೂ ಬಿಜಾಪುರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

10 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

10 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

10 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

11 hours ago