ಮನರಂಜನೆ

ಜೀವನ ಪಯಣದ ಸುತ್ತ ‘ಕಾವೇರಿ ತೀರದಲ್ಲಿ ಮುಂಗಾರಿದೆ’

ಥ್ರಿಲ್ಲರ್ ಮಂಜು ಅಭಿನಯದ ‘ಮುಗಿಲ ಮಲ್ಲಿಗೆ’ ಚಿತ್ರವನ್ನು ನಿರ್ದೇಶಿಸಿರುವ ಆರ್‍.ಕೆ. ಗಾಂಧಿ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ‘ಮುಗಿಲ ಮಲ್ಲಿಗೆ’ ಚಿತ್ರದ ಬಿಡುಗಡೆಗೂ ಮೊದಲೇ ಈ ಚಿತ್ರ ಪ್ರಾರಂಭವಾಗಲಿದ್ದು, ಚಿತ್ರಕ್ಕೆ ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಎಂಬ ಹೆಸರು ಇಡಲಾಗಿದೆ.

ಕನ್ನಡದಲ್ಲಿ ಇದಕ್ಕೂ ಮೊದಲು ‘ಕಾವೇರಿ ತೀರದಲ್ಲಿ’ ಎಂಬ ಚಿತ್ರ ಬಿಡುಗಡೆ ಆಗಿತ್ತು. ಇನ್ನು, ‘ಮುಂಗಾರು’ ಹೆಸರಿನ ಕೆಲವು ಚಿತ್ರಗಳು ಬಿಡುಗಡೆಯಾಗಿವೆ. ಈಗ ‘ಕಾವೇರಿ ತೀರದಲ್ಲಿ ಮುಂಗಾರು’ ಎಂಬ ಚಿತ್ರವನ್ನು ಆರ್‍.ಕೆ. ಗಾಂಧಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ಮನುಷ್ಯನ ಜೀವನ ಅನ್ನೋದು ಒಂದು ಸಮುದ್ರದ ತೀರದಂತೆ. ಅದು ಕೆಲವೊಮ್ಮೆ ಪ್ರಶಾಂತವಾಗಿ ಸಾಗುತ್ತಿದ್ದರೆ, ಮತ್ತೆ ಕೆಲವೊಮ್ಮೆ ಬೋರ್ಗೆರೆಯುವ ಅಲೆಗಳಿಂದ ಬದುಕನ್ನು ಎದುರಿಸಬೇಕಾಗುತ್ತದೆ. ಯಾವಾಗ ಪ್ರಶಾಂತವಾಗಿ ಸಾಗುತ್ತದೆ, ಯಾವಾಗ ತನ್ನ ದಿಕ್ಕನ್ನು ವಿರುದ್ಧವಾಗಿ ಬದಲಿಸಿಕೊಂಡುಬಿಡುತ್ತದೆ ಅನ್ನೋದನ್ನು ಯಾರಿಂದಲೂ ಸಹ ಊಹಿಸಲು ಸಾಧ್ಯವಾಗುವುದಿಲ್ಲ ಎಂಬ ಎಳೆ ಇಟ್ಟುಕೊಂಡು ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಕಥೆ ಮಾಡಲಾಗುತ್ತಿದೆ.

ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ನವೀನ್ ಕುಮಾರ್ ಗೌಡ, ಗೋಪಾಲ್ ಸ್ವಾಮಿ, ಹಾಗು ವಸಂತ ನಾಯಕ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಬಾಗಲಕೋಟೆ ಜಿಲ್ಲೆಯ ತೇರದಾಳ ಮೂಲದ ಉದಯ್ ಹಾಗೂ ಕನ್ನಡದಲ್ಲಿ ‘ಮಗಳೇ’, ‘ಅಸುರರು’ ಚಿತ್ರಗಳಲ್ಲಿ ನಟಿಸಿದ್ದ ಸುಪ್ರಿತಾ ರಾಜ್ ಈ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ.

‘ಕಾವೇರಿ ತೀರದಲ್ಲಿ ಮುಂಗಾರಿದೆ’ ಚಿತ್ರಕ್ಕೆ ಗಂಧರ್ವ ರಾಯ್ ರಾವುತ್ ಸಂಗೀತ ಮತ್ತು ನಾಗೇಂದ್ರ ಕುಮಾರ್ ಎಂ ಅವರ ಛಾಯಾಗ್ರಹಣವಿದೆ. ಚಿತ್ರದ ಚಿತ್ರೀಕರಣ ಏಪ್ರಿಲ್ 25 ರಿಂದ ಪ್ರಾರಂಭವಾಗಲಿದ್ದು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹೊಸಪೇಟೆ, ಬಾಗಲಕೋಟೆ ಹಾಗೂ ಬಿಜಾಪುರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

5 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

5 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

5 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

5 hours ago