ಮನರಂಜನೆ

ತಾಯವ್ವ’ ಈಗ ‘ಅಪರಿಚಿತೆ’: ಶೀರ್ಷಿಕೆ ಪೋಸ್ಟರ್ ಬಿಡುಗಡೆ

ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ ಶೀರ್ಷಿಕೆ ಪೋಸ್ಟರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಹಿಂದೆ ‘ಹನುಮಂತಪ್ಪನ ಎರಡು ಎಕರೆ ಜಾಗ’ ಎಂಬ ಚಿತ್ರ ನಿರ್ದೇಶಿಸಿದ್ದ ವಿಶ್ವನಾಥ, ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ‘ಅಪರಿಚಿತೆ’ ಕುರಿತು ಮಾತನಾಡುವ ಅವರು, ‘ಇದು ನೈಜ ಕಥೆ ಆಧಾರಿತ ಸಿನಿಮಾ. ಸಿಂಧೂ ಲೋಕನಾಥ್, ಆರ್.ಜೆ.ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದೊಂದು ಥ್ರಿಲ್ಲರ್‍ ಚಿತ್ರವಾಗಿದ್ದು, ಆದಷ್ಟು ಬೇಗ ಚಿತ್ರೀಕರಣ ಮಾಡಿ, ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ’ ಎಂದರು.

ಹಿರಿಯ ನಟ ಶ್ರೀನಾಥ್ ಮಾತನಾಡಿ, ‘ಕೊರೋನಾ ನಂತರ ನಾನು ನಟಿಸುತ್ತಿರುವ ಮೊದಲ ಸಿನಿಮಾ ಇದು. ಸಮಾಜಕ್ಕೆ ಒಂದು ಉತ್ತಮ ಸಂದೇಶ ಕೊಡಲು ಈ ಸಿನಿಮಾ ಮಾಡುತ್ತಿರುವುದು ಖುಷಿ ಆಯ್ತು. ಅದರಲ್ಲೂ ಮುಖ್ಯವಾಗಿ 40 ವರ್ಷದ ನಂತರ ನಾನು, ನನ್ನ ಮಗ ಒಂದೇ ಚಿತ್ರದಲ್ಲಿ ನಟಿಸುತ್ತಿರುವುದು ಹೆಚ್ಚಿನ ಖುಷಿ ಆಗುತ್ತಿದೆ’ ಎಂದರು.

ಶ್ರೀನಾಥ್ ಅವರ ಮಗ ರೋಹಿತ್‍ ಮಾತನಾಡಿ, ‘ನಾನು 35 ವರ್ಷ ಆದಮೇಲೆ ಸಿನಿಮಾದಲ್ಲಿ ನಟನೆ ಮಾಡತಾ ಇದ್ದೇನೆ. ಅದರಲ್ಲೂ ಅಪ್ಪನ ಜೊತೆ ನಟಿಸೋದು ಖುಷಿ ಇದೆ. ಪಾತ್ರ ಕೂಡ ತುಂಬಾ ಚನ್ನಾಗಿದೆ’ ಎಂದು ಹೇಳಿದರು.

‘ಅಪರಿಚಿತೆ’ ಚಿತ್ರವನ್ನು ಗೀತಪ್ರಿಯಾ ಅವರ ಪತಿ ಸುರೇಶ್‍ ನಾಗಪಲ್‍, ಅಮರ ಫಿಲಂಸ್‍ ಬ್ಯಾನರ್‍ ಅಡಿ ನಿರ್ಮಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

5 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

5 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

6 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

7 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

7 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

7 hours ago