ಮನರಂಜನೆ

ಮಗನ ಚಿತ್ರಕ್ಕೆ ಅಮ್ಮನೇ ನಿರ್ಮಾಪಕಿ, ಅಪ್ಪನೇ ಕಥೆಗಾರ …

ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ ಇದೀಗ ಮೈಸೂರಿನ ಶಶಿ ಆರಕ್ಷಕ್ ಕುಟುಂಬ ಸಹ ಸೇರಿದೆ. ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿರುವ ಶಶಿ, ತಮ್ಮ ಮಗನನ್ನು ಹೀರೋ ಮಾಡುವುದಕ್ಕೆ ‘ರಿಕ್ಷಾಚಾಲಕ’ ಎಂಬ ಚಿತ್ರ ಮಾಡಿದ್ದಾರೆ. ಇದಕ್ಕೆ ಅವರ ಪತ್ನಿಯೇ ನಿರ್ಮಾಪಕಿ, ಮತ್ತೊಬ್ಬ ಮಗನೇ ಹೀರೋ.

‘ರಿಕ್ಷಾಚಾಲಕ’ ಎಂಬ ಹೆಸರೇ ಹೇಳುವಂತೆ ಇದೊಬ್ಬ ಆಟೋ ಡ್ರೈವರ್‍ನ ಕಥೆ ಇರುವ ಚಿತ್ರ. ಈ ಚಿತ್ರದ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಶಶಿ ಅವರ ಮಗ ಚಿರಂತ್ ಈ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಅವರ ಸಹೋದರ ಆಯುಷ್‍ ಶಶಿಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.‌

ಈ ಚಿತ್ರದ ಕುರಿತು ಮಾತನಾಡುವ ಚಿರಂತ್‍, ‘ಲಾಕ್‌ಡೌನ್ ಸಂದರ್ಭದಲ್ಲಿ ಆಟೋ ಡ್ರೈವರ್‌ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದಾರೆ. ಒಬ್ಬ ಒಳ್ಳೆಯ ಆಟೋ ಚಾಲಕ ಸಮಾಜದಲ್ಲಿ ಏನೆಲ್ಲಾ ಕಷ್ಟ ಎದುರಿಸುತ್ತಾನೆ ಎಂದು ಈ ಸಿನಿಮಾದಲ್ಲಿ ತೋರಿಸಿದ್ದೇವೆ. ನಮ್ಮ ತಂದೆಯವರು ಡ್ಯಾನ್ಸ್ ಮಾಸ್ಟರ್ ಆಗಿದ್ದು, ಅವರನ್ನೇ ನೋಡಿಯೇ ನಾನು ಡ್ಯಾನ್ಸ್ ಕಲಿತಿದ್ದೇನೆ. ಈ ಚಿತ್ರವನ್ನು ಪುನೀತ್‍ ರಾಜಕುಮಾರ್ ಅವರಿಗೆ ಅರ್ಪಿಸಿದ್ದೇವೆ’ ಎಂದರು.

ನಿರ್ದೇಶಕ ಆಯುಷ್ ಶಶಿಕುಮಾರ್ ಮಾತನಾಡಿ, ‘ಚಿಕ್ಕ ವಯಸ್ಸಿನಿಂದ ತಂದೆಯವರು ನನ್ನನ್ನು ಶೂಟಿಂಗ್ ಇದ್ದಾಗ ಕರೆದುಕೊಂಡು ಹೋಗುತ್ತಿದ್ದರು. ಹಾಗೇ ಸಿನಿಮಾದ ಮೇಲಿನ ಆಸಕ್ತಿ ಬೆಳೆಯುತ್ತಾ ಬಂತು. ಇದೊಂದು ಆಕ್ಷನ್ ಫ್ಯಾಮಿಲಿ ಡ್ರಾಮಾ ಚಿತ್ರ’ ಎಂದರು.

‘ರಿಕ್ಷಾ ಚಾಲಕ’ ಸಿನಿಮಾದಲ್ಲಿ ಐದು ಹಾಡುಗಳಿದ್ದು, ವೇದಾಂತ್ ಅತಿಶಯ್ ಜೈನ್ ಅವರ ಸಂಗೀತವಿದೆ. ಚಿತ್ರಕ್ಕೆ ಆನಂದ್ ಛಾಯಾಗ್ರಹಣ ಮಾಡಿದ್ದು, ಈ ಚಿತ್ರದಲ್ಲಿ ಚಿರಂತ್‍, ನಂದಿನಿ, ದರ್ಶನ್, ಬಲ ರಾಜವಾಡಿ, ಚಂದ್ರಪ್ರಭ, ಮಿಮಿಕ್ರಿ ಗೋಪಿ ಮುಂತಾದವರು ನಟಿಸಿದ್ದಾರೆ. ಮೈಸೂರು, ವರುಣಾ, ಕೆ.ಆರ್.ನಗರ, ಸಾಲಿಗ್ರಾಮ ಹಾಗೂ ಮುರುಡೇಶ್ವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago