ಮನರಂಜನೆ

ಮಗನ ಚಿತ್ರಕ್ಕೆ ಅಮ್ಮನೇ ನಿರ್ಮಾಪಕಿ, ಅಪ್ಪನೇ ಕಥೆಗಾರ …

ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ ಇದೀಗ ಮೈಸೂರಿನ ಶಶಿ ಆರಕ್ಷಕ್ ಕುಟುಂಬ ಸಹ ಸೇರಿದೆ. ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿರುವ ಶಶಿ, ತಮ್ಮ ಮಗನನ್ನು ಹೀರೋ ಮಾಡುವುದಕ್ಕೆ ‘ರಿಕ್ಷಾಚಾಲಕ’ ಎಂಬ ಚಿತ್ರ ಮಾಡಿದ್ದಾರೆ. ಇದಕ್ಕೆ ಅವರ ಪತ್ನಿಯೇ ನಿರ್ಮಾಪಕಿ, ಮತ್ತೊಬ್ಬ ಮಗನೇ ಹೀರೋ.

‘ರಿಕ್ಷಾಚಾಲಕ’ ಎಂಬ ಹೆಸರೇ ಹೇಳುವಂತೆ ಇದೊಬ್ಬ ಆಟೋ ಡ್ರೈವರ್‍ನ ಕಥೆ ಇರುವ ಚಿತ್ರ. ಈ ಚಿತ್ರದ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಶಶಿ ಅವರ ಮಗ ಚಿರಂತ್ ಈ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಅವರ ಸಹೋದರ ಆಯುಷ್‍ ಶಶಿಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.‌

ಈ ಚಿತ್ರದ ಕುರಿತು ಮಾತನಾಡುವ ಚಿರಂತ್‍, ‘ಲಾಕ್‌ಡೌನ್ ಸಂದರ್ಭದಲ್ಲಿ ಆಟೋ ಡ್ರೈವರ್‌ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದಾರೆ. ಒಬ್ಬ ಒಳ್ಳೆಯ ಆಟೋ ಚಾಲಕ ಸಮಾಜದಲ್ಲಿ ಏನೆಲ್ಲಾ ಕಷ್ಟ ಎದುರಿಸುತ್ತಾನೆ ಎಂದು ಈ ಸಿನಿಮಾದಲ್ಲಿ ತೋರಿಸಿದ್ದೇವೆ. ನಮ್ಮ ತಂದೆಯವರು ಡ್ಯಾನ್ಸ್ ಮಾಸ್ಟರ್ ಆಗಿದ್ದು, ಅವರನ್ನೇ ನೋಡಿಯೇ ನಾನು ಡ್ಯಾನ್ಸ್ ಕಲಿತಿದ್ದೇನೆ. ಈ ಚಿತ್ರವನ್ನು ಪುನೀತ್‍ ರಾಜಕುಮಾರ್ ಅವರಿಗೆ ಅರ್ಪಿಸಿದ್ದೇವೆ’ ಎಂದರು.

ನಿರ್ದೇಶಕ ಆಯುಷ್ ಶಶಿಕುಮಾರ್ ಮಾತನಾಡಿ, ‘ಚಿಕ್ಕ ವಯಸ್ಸಿನಿಂದ ತಂದೆಯವರು ನನ್ನನ್ನು ಶೂಟಿಂಗ್ ಇದ್ದಾಗ ಕರೆದುಕೊಂಡು ಹೋಗುತ್ತಿದ್ದರು. ಹಾಗೇ ಸಿನಿಮಾದ ಮೇಲಿನ ಆಸಕ್ತಿ ಬೆಳೆಯುತ್ತಾ ಬಂತು. ಇದೊಂದು ಆಕ್ಷನ್ ಫ್ಯಾಮಿಲಿ ಡ್ರಾಮಾ ಚಿತ್ರ’ ಎಂದರು.

‘ರಿಕ್ಷಾ ಚಾಲಕ’ ಸಿನಿಮಾದಲ್ಲಿ ಐದು ಹಾಡುಗಳಿದ್ದು, ವೇದಾಂತ್ ಅತಿಶಯ್ ಜೈನ್ ಅವರ ಸಂಗೀತವಿದೆ. ಚಿತ್ರಕ್ಕೆ ಆನಂದ್ ಛಾಯಾಗ್ರಹಣ ಮಾಡಿದ್ದು, ಈ ಚಿತ್ರದಲ್ಲಿ ಚಿರಂತ್‍, ನಂದಿನಿ, ದರ್ಶನ್, ಬಲ ರಾಜವಾಡಿ, ಚಂದ್ರಪ್ರಭ, ಮಿಮಿಕ್ರಿ ಗೋಪಿ ಮುಂತಾದವರು ನಟಿಸಿದ್ದಾರೆ. ಮೈಸೂರು, ವರುಣಾ, ಕೆ.ಆರ್.ನಗರ, ಸಾಲಿಗ್ರಾಮ ಹಾಗೂ ಮುರುಡೇಶ್ವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಮಾ.13ರವರೆಗೆ ಕಪ್ಪಡಿ ಕ್ಷೇತ್ರದ ಜಾತ್ರೆ

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…

3 mins ago

ಹಾವಾಡಿಸುವ ಮುಬಾರಕನ ಬದುಕು ಪಾಡು

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…

33 mins ago

ಮೈಸೂರು ಮೈಸೂರಾಗಿಯೇ ಇರಲು ಏನು ಮಾಡಬೇಕು? ಏನು ಮಾಡಬಾರದು?

• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ…

55 mins ago

ಜಾಗತಿಕ ಕಾಮಜಾಲಗಳ ಮಾರ್ಜಾಲ ಜೆಫ್ರಿ ಎಫ್‌ಸ್ಟೀನ್‌

• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು…

1 hour ago

ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…

2 hours ago

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

3 hours ago