Categories: ಮನರಂಜನೆ

ʼಮಫ್ತಿ 2ʼ ಬರೋದು ನಿಜ ಎಂದ ಶಿವರಾಜಕುಮಾರ್ …

ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಲಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ ಬರಲಿದೆ ಎಂದು ಶಿವರಾಜಕುಮಾರ್ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಂತೋಷ ಕೂಟದಲ್ಲಿ ಮಾತನಾಡಿರುವ ಶಿವರಾಜಕುಮಾರ್, ʼʼಮಫ್ತಿʼ ಚಿತ್ರದ ನನ್ನ ಭೈರತಿ ರಣಗಲ್ ಪಾತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದರು ಎಂದು ಮಾತು ಶುರು ಮಾಡಿದ ಶಿವಣ್ಣ, ʼʼಭೈರತಿ ರಣಗಲ್ʼ ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದಾರೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು. ಮುಂದೆ ʼಮಫ್ತಿ ೨ʼ ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತಾ ಮಾಡುತ್ತೇನೆ. ಆದರೆ, ಶೀರ್ಷಿಕೆ ʼಮಫ್ತಿ ೨ʼ ಎಂದಿರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆʼ ಎಂದರು.

ಇನ್ನು, ಚಿತ್ರದ ಕಲೆಕ್ಷನ್ ಎಷ್ಟಾಗಿದೆ ಎಂಬ ವಿಷಯವನ್ನು ಚಿತ್ರತಂಡದವರಾಗಲೀ, ಚಿತ್ರವನ್ನು ವಿತರಣೆ ಮಾಡಿರುವ ಜಗದೀಶ್ ಫಿಲಂಸ್ನವರಾಗಲೀ ಘೋಷಣೆ ಮಾಡಿಲ್ಲ. ಆದರೆ, ವಿತರಕರ ಮುಖದಲ್ಲಿ ಸಂತೋಷ ಕಂಡೆ ಸಿನಿಮಾ ಗೆದ್ದ ಹಾಗೆ ಎಂದಿರುವ ವಿತರಕ ಜಗದೀಶ್, ʼಕನ್ನಡ ಚಿತ್ರಗಳು ಓಡುತ್ತಿಲ್ಲ ಎಂಬುದು ಸುಳ್ಳು. ಉತ್ತಮ ಚಿತ್ರಗಳನ್ನು ಬಂದರೆ ಜನ ಖಂಡಿತವಾಗಿ ಜನ ನೋಡುತ್ತಾರೆ. ಅದಕ್ಕೆ ಈ ಚಿತ್ರವೇ ಉದಾಹರಣೆ. ಎರಡನೇ ವಾರದಲ್ಲಿ ಶೋಗಳ ಸಂಖ್ಯೆ ಹೆಚ್ಚಳವಾಗಲಿದೆ. ವಿತರಕರ ಮುಖದಲ್ಲಿ ಸಂತೋಷ ಕಂಡರೆ ಆ ಸಿನಿಮಾ ಗೆದ್ದ ಹಾಗೆʼ  ಎಂದರು.

ಭೂಮಿಕಾ

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago