Categories: ಮನರಂಜನೆ

ʼಮಫ್ತಿ 2ʼ ಬರೋದು ನಿಜ ಎಂದ ಶಿವರಾಜಕುಮಾರ್ …

ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಲಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ ಬರಲಿದೆ ಎಂದು ಶಿವರಾಜಕುಮಾರ್ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಂತೋಷ ಕೂಟದಲ್ಲಿ ಮಾತನಾಡಿರುವ ಶಿವರಾಜಕುಮಾರ್, ʼʼಮಫ್ತಿʼ ಚಿತ್ರದ ನನ್ನ ಭೈರತಿ ರಣಗಲ್ ಪಾತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದರು ಎಂದು ಮಾತು ಶುರು ಮಾಡಿದ ಶಿವಣ್ಣ, ʼʼಭೈರತಿ ರಣಗಲ್ʼ ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದಾರೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು. ಮುಂದೆ ʼಮಫ್ತಿ ೨ʼ ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತಾ ಮಾಡುತ್ತೇನೆ. ಆದರೆ, ಶೀರ್ಷಿಕೆ ʼಮಫ್ತಿ ೨ʼ ಎಂದಿರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆʼ ಎಂದರು.

ಇನ್ನು, ಚಿತ್ರದ ಕಲೆಕ್ಷನ್ ಎಷ್ಟಾಗಿದೆ ಎಂಬ ವಿಷಯವನ್ನು ಚಿತ್ರತಂಡದವರಾಗಲೀ, ಚಿತ್ರವನ್ನು ವಿತರಣೆ ಮಾಡಿರುವ ಜಗದೀಶ್ ಫಿಲಂಸ್ನವರಾಗಲೀ ಘೋಷಣೆ ಮಾಡಿಲ್ಲ. ಆದರೆ, ವಿತರಕರ ಮುಖದಲ್ಲಿ ಸಂತೋಷ ಕಂಡೆ ಸಿನಿಮಾ ಗೆದ್ದ ಹಾಗೆ ಎಂದಿರುವ ವಿತರಕ ಜಗದೀಶ್, ʼಕನ್ನಡ ಚಿತ್ರಗಳು ಓಡುತ್ತಿಲ್ಲ ಎಂಬುದು ಸುಳ್ಳು. ಉತ್ತಮ ಚಿತ್ರಗಳನ್ನು ಬಂದರೆ ಜನ ಖಂಡಿತವಾಗಿ ಜನ ನೋಡುತ್ತಾರೆ. ಅದಕ್ಕೆ ಈ ಚಿತ್ರವೇ ಉದಾಹರಣೆ. ಎರಡನೇ ವಾರದಲ್ಲಿ ಶೋಗಳ ಸಂಖ್ಯೆ ಹೆಚ್ಚಳವಾಗಲಿದೆ. ವಿತರಕರ ಮುಖದಲ್ಲಿ ಸಂತೋಷ ಕಂಡರೆ ಆ ಸಿನಿಮಾ ಗೆದ್ದ ಹಾಗೆʼ  ಎಂದರು.

ಭೂಮಿಕಾ

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

5 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

7 hours ago