Categories: ಮನರಂಜನೆ

ʼಮಫ್ತಿ 2ʼ ಬರೋದು ನಿಜ ಎಂದ ಶಿವರಾಜಕುಮಾರ್ …

ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಲಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ ಬರಲಿದೆ ಎಂದು ಶಿವರಾಜಕುಮಾರ್ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಂತೋಷ ಕೂಟದಲ್ಲಿ ಮಾತನಾಡಿರುವ ಶಿವರಾಜಕುಮಾರ್, ʼʼಮಫ್ತಿʼ ಚಿತ್ರದ ನನ್ನ ಭೈರತಿ ರಣಗಲ್ ಪಾತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದರು ಎಂದು ಮಾತು ಶುರು ಮಾಡಿದ ಶಿವಣ್ಣ, ʼʼಭೈರತಿ ರಣಗಲ್ʼ ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದಾರೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು. ಮುಂದೆ ʼಮಫ್ತಿ ೨ʼ ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತಾ ಮಾಡುತ್ತೇನೆ. ಆದರೆ, ಶೀರ್ಷಿಕೆ ʼಮಫ್ತಿ ೨ʼ ಎಂದಿರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆʼ ಎಂದರು.

ಇನ್ನು, ಚಿತ್ರದ ಕಲೆಕ್ಷನ್ ಎಷ್ಟಾಗಿದೆ ಎಂಬ ವಿಷಯವನ್ನು ಚಿತ್ರತಂಡದವರಾಗಲೀ, ಚಿತ್ರವನ್ನು ವಿತರಣೆ ಮಾಡಿರುವ ಜಗದೀಶ್ ಫಿಲಂಸ್ನವರಾಗಲೀ ಘೋಷಣೆ ಮಾಡಿಲ್ಲ. ಆದರೆ, ವಿತರಕರ ಮುಖದಲ್ಲಿ ಸಂತೋಷ ಕಂಡೆ ಸಿನಿಮಾ ಗೆದ್ದ ಹಾಗೆ ಎಂದಿರುವ ವಿತರಕ ಜಗದೀಶ್, ʼಕನ್ನಡ ಚಿತ್ರಗಳು ಓಡುತ್ತಿಲ್ಲ ಎಂಬುದು ಸುಳ್ಳು. ಉತ್ತಮ ಚಿತ್ರಗಳನ್ನು ಬಂದರೆ ಜನ ಖಂಡಿತವಾಗಿ ಜನ ನೋಡುತ್ತಾರೆ. ಅದಕ್ಕೆ ಈ ಚಿತ್ರವೇ ಉದಾಹರಣೆ. ಎರಡನೇ ವಾರದಲ್ಲಿ ಶೋಗಳ ಸಂಖ್ಯೆ ಹೆಚ್ಚಳವಾಗಲಿದೆ. ವಿತರಕರ ಮುಖದಲ್ಲಿ ಸಂತೋಷ ಕಂಡರೆ ಆ ಸಿನಿಮಾ ಗೆದ್ದ ಹಾಗೆʼ  ಎಂದರು.

ಭೂಮಿಕಾ

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago