‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ.
ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್ ಲೋಕನಾಥ್ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಕಳೆದ ವರ್ಷ ಸದ್ದಿಲ್ಲದೆ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.
‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಬಾಬಿ ಅವರೇ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.
‘ಜಸ್ಟ್ ಮ್ಯಾರೀಡ್’ ಚಿತ್ರದಲ್ಲಿ ಪ್ರತಿಭಾವಂತ ನಟ-ನಟಿಯರ ದಂಡೇ ಇದ್ದು, ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮಿಕ್ಕಂತೆ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.
ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…