ಮನರಂಜನೆ

‘ಜಸ್ಟ್ ಮ್ಯಾರೀಡ್‍’ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್

‘ಜಸ್ಟ್ ಮ್ಯಾರೀಡ್‍’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್‍.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ.

ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್‍ ಲೋಕನಾಥ್‍ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್‍’ ಚಿತ್ರವು ಕಳೆದ ವರ್ಷ ಸದ್ದಿಲ್ಲದೆ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.

‘ಬಿಗ್‍ ಬಾಸ್‍’ ಖ್ಯಾತಿಯ ಶೈನ್‍ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್‍’ ಚಿತ್ರಕ್ಕೆ ಬಾಬಿ ಅವರೇ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.

‘ಜಸ್ಟ್ ಮ್ಯಾರೀಡ್‍’ ಚಿತ್ರದಲ್ಲಿ ಪ್ರತಿಭಾವಂತ ನಟ-ನಟಿಯರ ದಂಡೇ ಇದ್ದು, ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮಿಕ್ಕಂತೆ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.

ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

1 hour ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

1 hour ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

1 hour ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

2 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago