‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ.
ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್ ಲೋಕನಾಥ್ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಕಳೆದ ವರ್ಷ ಸದ್ದಿಲ್ಲದೆ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.
‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಬಾಬಿ ಅವರೇ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.
‘ಜಸ್ಟ್ ಮ್ಯಾರೀಡ್’ ಚಿತ್ರದಲ್ಲಿ ಪ್ರತಿಭಾವಂತ ನಟ-ನಟಿಯರ ದಂಡೇ ಇದ್ದು, ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮಿಕ್ಕಂತೆ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.
ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…