‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ.
ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್ ಲೋಕನಾಥ್ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಕಳೆದ ವರ್ಷ ಸದ್ದಿಲ್ಲದೆ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.
‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಬಾಬಿ ಅವರೇ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.
‘ಜಸ್ಟ್ ಮ್ಯಾರೀಡ್’ ಚಿತ್ರದಲ್ಲಿ ಪ್ರತಿಭಾವಂತ ನಟ-ನಟಿಯರ ದಂಡೇ ಇದ್ದು, ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮಿಕ್ಕಂತೆ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.
ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…