muhurtha set for LT Muttha kannada cinema
ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಚಿತ್ರಗಳ ಪೈಕಿ ‘ಎಲ್ಟು ಮುತ್ತಾ’ ಸಹ ಒಂದು. ಶೌರ್ಯ ಪ್ರತಾಪ್, ಪ್ರಿಯಾಂಕಾ ಮಳಲಿ ಮುಂತಾದವರು ಅಭಿನಯಿಸಿದ್ದ ಈ ಚಿತ್ರದ ಹಾಡುಗಳು ಬಿಡುಗುಡೆ ಸಮಾರಂಭ ಕೆಲವು ದಿನಗಳ ಹಿಂದೆ ನಡೆದಿತ್ತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ ದಿನಾಂಕ ಘೋಷಿಸಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
HIGH 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಎಸ್.ಶ್ರೀನಿವಾಸನ್ ನಿರ್ಮಿಸಿರುವ, ರಾ. ಸೂರ್ಯ ನಿರ್ದೇಶನದ ‘ಎಲ್ಟು ಮುತ್ತಾ’ ಚಿತ್ರದ ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್ನಲ್ಲಿ ಅನಾವರಣವಾಯಿತು. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಟ್ರೇಲರ್ ಬಿಡುಗಡೆ ಮಾಡಿದರು. ನಟರಾದ ಕಿಶೋರ್ ಕುಮಾರ್, ಮನೋರಂಜನ್ ರವಿಚಂದ್ರನ್, ಪೊಲೀಸ್ ಅಧಿಕಾರಿ ರಾಜೇಶ್ ಮುಂತಾದವರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
ಇದೊಂದು ಮಾಸ್ ಚಿತ್ರವಾಗಿದ್ದು, ಕೊಡಗಿನ ಹಿನ್ನೆಲೆಯಲ್ಲಿ ಕಥೆ ನಡೆಯುತ್ತದೆ. ಆದರೆ, ಇದು ಬರೀ ಕೊಡಗಿನ ಕಥೆಯಲ್ಲ, ಕೊಡಗಿನ ಕಥೆಯನ್ನು ಇಡೀ ಕರ್ನಾಟಕಕ್ಕೆ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ ಎನ್ನುತ್ತಾರೆ ನಿರ್ದೇಶಕ ರಾ.ಸೂರ್ಯ. ‘ನಾನು ಮೂಲತಃ ಕೊಡಗಿನವನು. ಅಲ್ಲಿ ನಡೆದ ಒಂದಿಷ್ಟು ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ನಾನು ಈ ಜನರನ್ನು ನೋಡಿದ್ದೇನೆ. ಅದರಲ್ಲಿ ಕೆಲವರು ಬದುಕಿದ್ದಾರೆ. ಇನ್ನೂ ಕೆಲವರು ಬದುಕಿಲ್ಲ. ಅವರ ಜೀವನವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಿದ್ದೇನೆ. ಸುಮಾರು 55 ದಿನಗಳ ಕಾಲ ಕೊಡಗಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಒಂದು ಹಾಡನ್ನು ಕನಕಪುರದ ಬಳಿ ಚಿತ್ರೀಕರಿಸಲಾಗಿದೆ’ ಎಂದರು.
‘ಎಲ್ಟು ಮುತ್ತ’ ಚಿತ್ರದಲ್ಲಿ ರಾ. ಸೂರ್ಯ, ಶೌರ್ಯ ಪ್ರತಾಪ್, ಪ್ರಿಯಾಂಕ ಮಳಲಿ, ಯಮುನಾ ಶ್ರೀನಿಧಿ, ನವೀನ್ ಡಿ. ಪಡೀಲ್, ಕಾಕ್ರೋಚ್ ಸುಧಿ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಕೇಶವ ಪ್ರಸನ್ನ ಸಂಗೀತವಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…