ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.
ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ ತಮ್ಮ ಹೆಂಡತಿ ಪರ ಪ್ರಚಾರ ಮಾಡುತ್ತಿರುವ ಶಿವಣ್ಣ, ದೊಡ್ಮನೆ ರಾಜಕೀಯಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಅಪ್ಪಾಜಿಗೆ ರಾಜಕೀಯ ಆಗುತ್ತಿರಲಿಲ್ಲ ಅಂತ ಕೆಲವರು ಹೇಳ್ತಾರೆ. ಹಾಗೇನೂ ಇಲ್ಲ. ಯಾವುದೇ ಸಮಾರಂಭ ಆಗಲಿ, ಯಾವುದೇ ಮುಖ್ಯಮಂತ್ರಿ ಆಗಲಿ, ಮೊದಲು ದೊಡ್ಮನೆಗೆ ಬಂದು ಅಪ್ಪಾಜಿ ಜೊತೆ ಮಾತಾಡುತ್ತಿದ್ದರು. ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ರಾಜಕೀಯದ ವ್ಯಕ್ತಿಗಳು ಬೇಕು. ಇಲ್ಲಾಂದ್ರೆ ನನಗೆ ಯಾಕೆ ಬಂಗಾರಪ್ಪನ ಮಗಳು ತರಬೇಕು ಹೇಳಿ? ಅವರು ರಾಜಕೀಯವನ್ನು ಯಾವಾಗಲೂ ತಪ್ಪು ಅಂತ ಹೇಳಿಲ್ಲ ಎಂದು ಶಿವಣ್ಣ ಹೇಳಿದ್ದಾರೆ.
ಅಪ್ಪಾಜಿಗೆ ವೈಯಕ್ತಿಕವಾಗಿ ರಾಜಕೀಯ ಆಗುತ್ತಿರಲಿಲ್ಲ ಅಷ್ಟೇ. ತಮ್ಮ ಕೆಲಸ ನಟನೆ ಅಂತ ಹೇಳಿದ್ದರು. ಅಪ್ಪಾಜಿ ನನಗೆ ಕೊಟ್ಟ ಬಳುವಳಿಯೇ ಸಿನಿಮಾ. ಹಾಗಾಗಿ ನಾನು ರಾಜಕೀಯ ರಂಗಕ್ಕೆ ಹೋಗಲಿಲ್ಲ. ಆದರೆ ಗೀತಾಗೆ ಹಾಗಲ್ಲ. ಅವರ ತಂದೆಯ ರಕ್ತನೂ ಇದೆ. ಅದೊಂದು ಜವಾಬ್ದಾರಿ ಅವರಿಗೆ ಇದೆ. ಬರೀ ಗಂಡಸರಿಗೆ ಮಾತ್ರ ಜವಾಬ್ದಾರಿ ಇರಬೇಕಾ? ಹೆಣ್ಮಕ್ಕಳಿಗೆ ಇರಬಾರದಾ? ಕರ್ನಾಟಕದ ಮಹಿಳೆಯರು ರಾಜಕೀಯದಲ್ಲಿ ಕಡಿಮೆ ಜನ ಇದ್ದಾರೆ. ಈಗ ಹೆಣ್ಮಕ್ಕಳೇ ಸ್ಟ್ರಾಂಗ್ ಗುರು’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ.
ಚಿತ್ರರಂಗದಲ್ಲಿ ಎಲ್ಲರೂ ಸೇರಿ ಕುಟುಂಬ ಆಗುತ್ತದೆ. ಆ ಇಡೀ ಕುಟುಂಬ ಇವತ್ತು ಗೀತಾ ಪರವಾಗಿ ನಿಂತಿದ್ದಕ್ಕೆ ನಮಗೆ ಹೆಮ್ಮೆ ಆಗುತ್ತದೆ. ಇದಕ್ಕೆ ನಾವು ಧನ್ಯ’ ಎಂದು ಶಿವರಾಜ್ಕುಮಾರ್ ಅಭಿನಂದನೆ ಸಲ್ಲಿಸಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…