ಮನರಂಜನೆ

ಅಪ್ಪಾಜಿಗೂ ರಾಜಕೀಯದ ಮೇಲೆ ಆಸಕ್ತಿಯಿತ್ತು: ಶಿವಣ್ಣ ಅಚ್ಚರಿ ಹೇಳಿಕೆ!

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ ತಮ್ಮ ಹೆಂಡತಿ ಪರ ಪ್ರಚಾರ ಮಾಡುತ್ತಿರುವ ಶಿವಣ್ಣ, ದೊಡ್ಮನೆ ರಾಜಕೀಯಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಅಪ್ಪಾಜಿಗೆ ರಾಜಕೀಯ ಆಗುತ್ತಿರಲಿಲ್ಲ ಅಂತ ಕೆಲವರು ಹೇಳ್ತಾರೆ. ಹಾಗೇನೂ ಇಲ್ಲ. ಯಾವುದೇ ಸಮಾರಂಭ ಆಗಲಿ, ಯಾವುದೇ ಮುಖ್ಯಮಂತ್ರಿ ಆಗಲಿ, ಮೊದಲು ದೊಡ್ಮನೆಗೆ ಬಂದು ಅಪ್ಪಾಜಿ ಜೊತೆ ಮಾತಾಡುತ್ತಿದ್ದರು. ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ರಾಜಕೀಯದ ವ್ಯಕ್ತಿಗಳು ಬೇಕು. ಇಲ್ಲಾಂದ್ರೆ ನನಗೆ ಯಾಕೆ ಬಂಗಾರಪ್ಪನ ಮಗಳು ತರಬೇಕು ಹೇಳಿ? ಅವರು ರಾಜಕೀಯವನ್ನು ಯಾವಾಗಲೂ ತಪ್ಪು ಅಂತ ಹೇಳಿಲ್ಲ ಎಂದು ಶಿವಣ್ಣ ಹೇಳಿದ್ದಾರೆ.

ಅಪ್ಪಾಜಿಗೆ ವೈಯಕ್ತಿಕವಾಗಿ ರಾಜಕೀಯ ಆಗುತ್ತಿರಲಿಲ್ಲ ಅಷ್ಟೇ. ತಮ್ಮ ಕೆಲಸ ನಟನೆ ಅಂತ ಹೇಳಿದ್ದರು. ಅಪ್ಪಾಜಿ ನನಗೆ ಕೊಟ್ಟ ಬಳುವಳಿಯೇ ಸಿನಿಮಾ. ಹಾಗಾಗಿ ನಾನು ರಾಜಕೀಯ ರಂಗಕ್ಕೆ ಹೋಗಲಿಲ್ಲ. ಆದರೆ ಗೀತಾಗೆ ಹಾಗಲ್ಲ. ಅವರ ತಂದೆಯ ರಕ್ತನೂ ಇದೆ. ಅದೊಂದು ಜವಾಬ್ದಾರಿ ಅವರಿಗೆ ಇದೆ. ಬರೀ ಗಂಡಸರಿಗೆ ಮಾತ್ರ ಜವಾಬ್ದಾರಿ ಇರಬೇಕಾ? ಹೆಣ್ಮಕ್ಕಳಿಗೆ ಇರಬಾರದಾ? ಕರ್ನಾಟಕದ ಮಹಿಳೆಯರು ರಾಜಕೀಯದಲ್ಲಿ ಕಡಿಮೆ ಜನ ಇದ್ದಾರೆ. ಈಗ ಹೆಣ್ಮಕ್ಕಳೇ ಸ್ಟ್ರಾಂಗ್ ಗುರು’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಚಿತ್ರರಂಗದಲ್ಲಿ ಎಲ್ಲರೂ ಸೇರಿ ಕುಟುಂಬ ಆಗುತ್ತದೆ. ಆ ಇಡೀ ಕುಟುಂಬ ಇವತ್ತು ಗೀತಾ ಪರವಾಗಿ ನಿಂತಿದ್ದಕ್ಕೆ ನಮಗೆ ಹೆಮ್ಮೆ ಆಗುತ್ತದೆ. ಇದಕ್ಕೆ ನಾವು ಧನ್ಯ’ ಎಂದು ಶಿವರಾಜ್​ಕುಮಾರ್ ಅಭಿನಂದನೆ ಸಲ್ಲಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago