ಮನರಂಜನೆ

ಒಂದೇ ಚಿತ್ರದಲ್ಲಿ, ಏಳು ಅವತಾರಗಳಲ್ಲಿ ನಭಾ ನಟೇಶ್‍

ಕನ್ನಡತಿ ನಭಾ ನಟೇಶ್‍, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್‍ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್‍, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ ಅಭಿನಯದ ಚಿತ್ರವೊಂದು ಮೂರು ವರ್ಷಗಳ ನಂತರ ಬಿಡುಗಡೆಯಾಗಿದೆ.

ಹೌದು, ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಭಾ ಅಭಿನಯದ ಯಾವೊಂದು ಚಿತ್ರ ಸಹ ಕಳೆದ ಮೂರು ವರ್ಷಗಳಿಂದ ಬಿಡುಗಡೆಯಾಗಿರಲಿಲ್ಲ. ಅದಕ್ಕೆ ಕಾರಣ, ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮೇಸ್ಟ್ರೋ’ ಚಿತ್ರವೇ ಕೊನೆ, ಆ ನಂತರ ನಭಾ ಅಭಿನಯದ ಯಾವ ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಕಾರಣ, ನಭಾಗೆ ಎಡಭುಜದಲ್ಲಿ ಪೆಟ್ಟಾಗಿತ್ತು. ಅವರಿಗೆ ಸರ್ಜರಿ ಸಹ ಆಗಿತ್ತು. ಆ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ.

ಕಳೆದ ವರ್ಷ ಕ್ರಮೇಣ ಚೇತರಿಸಿಕೊಂಡ ನಭಾ, ನಟಿಸುವುದನ್ನು ಮುಂದುವರೆಸಿದರು. ಅಪಘಾತದ ನಂತರ ಅವರು ನಟಿಸಿದ ಮೊದಲ ಚಿತ್ರ ‘ಡಾರ್ಲಿಂಗ್’ ಕಳೆದ ವಾರ ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗಿದೆ. ‘ಡಾರ್ಲಿಂಗ್’ ಹೆಸರಿನ ಈ ಚಿತ್ರದಲ್ಲಿ ಪ್ರಿಯದರ್ಶಿನಿ ಪುಲಿಕೊಂಡಗೆ ನಭಾ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಇದು ಒಂದೇ ಪಾತ್ರವಾದರೂ, ಏಳು ಅವತಾರಗಳಲ್ಲಿ ನಭಾ ಕಾಣಿಸಿಕೊಂಡಿದ್ದಾರೆ. ಮಲ್ಟಿಪಲ್‍ ಪರ್ಸನಾಲಿಟಿ ಡಿಸಾರ್ಡರ್ ಸಮಸ್ಯೆ ಇರುವ ನಾಯಕಿಯಾಗಿ ನಭಾ ನಟಿಸಿದ್ದು, ಏಳು ವಿಭಿನ್ನ ಶೈಲಿಯಲ್ಲಿ ನಟಿಸಿದ್ದಾರೆ. ನಭಾ ನಟನೆಗೆ ಇದೀಗ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಂದಹಾಗೆ, ಇದಲ್ಲೆ ‘ಸ್ವಯಂಭು’ ಎಂಬ ಇನ್ನೊಂದು ಚಿತ್ರದಲ್ಲೂ ನಭಾ ನಟಿಸುತ್ತಿದ್ದಾರೆ. ‘ಕಾರ್ತಿಕೇಯ’ ಖ್ಯಾರಿಯ ನಿಖಿಲ್‍ ಸಿದ್ಧಾರ್ಥ್‍ ಅಭಿನಯದ ಈ ಚಿತ್ರವು ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಷ್ಟೇ ಅಲ್ಲ, ನಿಖಿಲ್‍ ವೃತ್ತಿಜೀವನದಲ್ಲೇ ಅತ್ಯಮತ ದೊಡ್ಡ ಬಜೆಟ್‍ನ ಚಿತ್ರವಾಗಿದೆ. ಇದಲ್ಲದೆ, ಇನ್ನೊಂದಿಷ್ಟು ಚಿತ್ರಗಳಲ್ಲಿ ನಭಾ ಹೆಸರು ಕೇಳಿಬರುತ್ತಿದ್ದು, ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿದ್ದಾರೆ ನಭಾ.

ಭೂಮಿಕಾ

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

22 mins ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

1 hour ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

2 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

2 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

2 hours ago