ಮನರಂಜನೆ

ಒಂದೇ ಚಿತ್ರದಲ್ಲಿ, ಏಳು ಅವತಾರಗಳಲ್ಲಿ ನಭಾ ನಟೇಶ್‍

ಕನ್ನಡತಿ ನಭಾ ನಟೇಶ್‍, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್‍ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್‍, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ ಅಭಿನಯದ ಚಿತ್ರವೊಂದು ಮೂರು ವರ್ಷಗಳ ನಂತರ ಬಿಡುಗಡೆಯಾಗಿದೆ.

ಹೌದು, ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಭಾ ಅಭಿನಯದ ಯಾವೊಂದು ಚಿತ್ರ ಸಹ ಕಳೆದ ಮೂರು ವರ್ಷಗಳಿಂದ ಬಿಡುಗಡೆಯಾಗಿರಲಿಲ್ಲ. ಅದಕ್ಕೆ ಕಾರಣ, ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮೇಸ್ಟ್ರೋ’ ಚಿತ್ರವೇ ಕೊನೆ, ಆ ನಂತರ ನಭಾ ಅಭಿನಯದ ಯಾವ ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಕಾರಣ, ನಭಾಗೆ ಎಡಭುಜದಲ್ಲಿ ಪೆಟ್ಟಾಗಿತ್ತು. ಅವರಿಗೆ ಸರ್ಜರಿ ಸಹ ಆಗಿತ್ತು. ಆ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ.

ಕಳೆದ ವರ್ಷ ಕ್ರಮೇಣ ಚೇತರಿಸಿಕೊಂಡ ನಭಾ, ನಟಿಸುವುದನ್ನು ಮುಂದುವರೆಸಿದರು. ಅಪಘಾತದ ನಂತರ ಅವರು ನಟಿಸಿದ ಮೊದಲ ಚಿತ್ರ ‘ಡಾರ್ಲಿಂಗ್’ ಕಳೆದ ವಾರ ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗಿದೆ. ‘ಡಾರ್ಲಿಂಗ್’ ಹೆಸರಿನ ಈ ಚಿತ್ರದಲ್ಲಿ ಪ್ರಿಯದರ್ಶಿನಿ ಪುಲಿಕೊಂಡಗೆ ನಭಾ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಇದು ಒಂದೇ ಪಾತ್ರವಾದರೂ, ಏಳು ಅವತಾರಗಳಲ್ಲಿ ನಭಾ ಕಾಣಿಸಿಕೊಂಡಿದ್ದಾರೆ. ಮಲ್ಟಿಪಲ್‍ ಪರ್ಸನಾಲಿಟಿ ಡಿಸಾರ್ಡರ್ ಸಮಸ್ಯೆ ಇರುವ ನಾಯಕಿಯಾಗಿ ನಭಾ ನಟಿಸಿದ್ದು, ಏಳು ವಿಭಿನ್ನ ಶೈಲಿಯಲ್ಲಿ ನಟಿಸಿದ್ದಾರೆ. ನಭಾ ನಟನೆಗೆ ಇದೀಗ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಂದಹಾಗೆ, ಇದಲ್ಲೆ ‘ಸ್ವಯಂಭು’ ಎಂಬ ಇನ್ನೊಂದು ಚಿತ್ರದಲ್ಲೂ ನಭಾ ನಟಿಸುತ್ತಿದ್ದಾರೆ. ‘ಕಾರ್ತಿಕೇಯ’ ಖ್ಯಾರಿಯ ನಿಖಿಲ್‍ ಸಿದ್ಧಾರ್ಥ್‍ ಅಭಿನಯದ ಈ ಚಿತ್ರವು ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಷ್ಟೇ ಅಲ್ಲ, ನಿಖಿಲ್‍ ವೃತ್ತಿಜೀವನದಲ್ಲೇ ಅತ್ಯಮತ ದೊಡ್ಡ ಬಜೆಟ್‍ನ ಚಿತ್ರವಾಗಿದೆ. ಇದಲ್ಲದೆ, ಇನ್ನೊಂದಿಷ್ಟು ಚಿತ್ರಗಳಲ್ಲಿ ನಭಾ ಹೆಸರು ಕೇಳಿಬರುತ್ತಿದ್ದು, ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿದ್ದಾರೆ ನಭಾ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago