ಮನರಂಜನೆ

ಒಂದೇ ಚಿತ್ರದಲ್ಲಿ, ಏಳು ಅವತಾರಗಳಲ್ಲಿ ನಭಾ ನಟೇಶ್‍

ಕನ್ನಡತಿ ನಭಾ ನಟೇಶ್‍, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್‍ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್‍, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ ಅಭಿನಯದ ಚಿತ್ರವೊಂದು ಮೂರು ವರ್ಷಗಳ ನಂತರ ಬಿಡುಗಡೆಯಾಗಿದೆ.

ಹೌದು, ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಭಾ ಅಭಿನಯದ ಯಾವೊಂದು ಚಿತ್ರ ಸಹ ಕಳೆದ ಮೂರು ವರ್ಷಗಳಿಂದ ಬಿಡುಗಡೆಯಾಗಿರಲಿಲ್ಲ. ಅದಕ್ಕೆ ಕಾರಣ, ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮೇಸ್ಟ್ರೋ’ ಚಿತ್ರವೇ ಕೊನೆ, ಆ ನಂತರ ನಭಾ ಅಭಿನಯದ ಯಾವ ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಕಾರಣ, ನಭಾಗೆ ಎಡಭುಜದಲ್ಲಿ ಪೆಟ್ಟಾಗಿತ್ತು. ಅವರಿಗೆ ಸರ್ಜರಿ ಸಹ ಆಗಿತ್ತು. ಆ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ.

ಕಳೆದ ವರ್ಷ ಕ್ರಮೇಣ ಚೇತರಿಸಿಕೊಂಡ ನಭಾ, ನಟಿಸುವುದನ್ನು ಮುಂದುವರೆಸಿದರು. ಅಪಘಾತದ ನಂತರ ಅವರು ನಟಿಸಿದ ಮೊದಲ ಚಿತ್ರ ‘ಡಾರ್ಲಿಂಗ್’ ಕಳೆದ ವಾರ ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗಿದೆ. ‘ಡಾರ್ಲಿಂಗ್’ ಹೆಸರಿನ ಈ ಚಿತ್ರದಲ್ಲಿ ಪ್ರಿಯದರ್ಶಿನಿ ಪುಲಿಕೊಂಡಗೆ ನಭಾ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಇದು ಒಂದೇ ಪಾತ್ರವಾದರೂ, ಏಳು ಅವತಾರಗಳಲ್ಲಿ ನಭಾ ಕಾಣಿಸಿಕೊಂಡಿದ್ದಾರೆ. ಮಲ್ಟಿಪಲ್‍ ಪರ್ಸನಾಲಿಟಿ ಡಿಸಾರ್ಡರ್ ಸಮಸ್ಯೆ ಇರುವ ನಾಯಕಿಯಾಗಿ ನಭಾ ನಟಿಸಿದ್ದು, ಏಳು ವಿಭಿನ್ನ ಶೈಲಿಯಲ್ಲಿ ನಟಿಸಿದ್ದಾರೆ. ನಭಾ ನಟನೆಗೆ ಇದೀಗ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಂದಹಾಗೆ, ಇದಲ್ಲೆ ‘ಸ್ವಯಂಭು’ ಎಂಬ ಇನ್ನೊಂದು ಚಿತ್ರದಲ್ಲೂ ನಭಾ ನಟಿಸುತ್ತಿದ್ದಾರೆ. ‘ಕಾರ್ತಿಕೇಯ’ ಖ್ಯಾರಿಯ ನಿಖಿಲ್‍ ಸಿದ್ಧಾರ್ಥ್‍ ಅಭಿನಯದ ಈ ಚಿತ್ರವು ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಷ್ಟೇ ಅಲ್ಲ, ನಿಖಿಲ್‍ ವೃತ್ತಿಜೀವನದಲ್ಲೇ ಅತ್ಯಮತ ದೊಡ್ಡ ಬಜೆಟ್‍ನ ಚಿತ್ರವಾಗಿದೆ. ಇದಲ್ಲದೆ, ಇನ್ನೊಂದಿಷ್ಟು ಚಿತ್ರಗಳಲ್ಲಿ ನಭಾ ಹೆಸರು ಕೇಳಿಬರುತ್ತಿದ್ದು, ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿದ್ದಾರೆ ನಭಾ.

ಭೂಮಿಕಾ

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

30 mins ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

1 hour ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

4 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

12 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

12 hours ago