ಮನರಂಜನೆ

ಒಂದೇ ಚಿತ್ರದಲ್ಲಿ, ಏಳು ಅವತಾರಗಳಲ್ಲಿ ನಭಾ ನಟೇಶ್‍

ಕನ್ನಡತಿ ನಭಾ ನಟೇಶ್‍, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್‍ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್‍, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ ಅಭಿನಯದ ಚಿತ್ರವೊಂದು ಮೂರು ವರ್ಷಗಳ ನಂತರ ಬಿಡುಗಡೆಯಾಗಿದೆ.

ಹೌದು, ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಭಾ ಅಭಿನಯದ ಯಾವೊಂದು ಚಿತ್ರ ಸಹ ಕಳೆದ ಮೂರು ವರ್ಷಗಳಿಂದ ಬಿಡುಗಡೆಯಾಗಿರಲಿಲ್ಲ. ಅದಕ್ಕೆ ಕಾರಣ, ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮೇಸ್ಟ್ರೋ’ ಚಿತ್ರವೇ ಕೊನೆ, ಆ ನಂತರ ನಭಾ ಅಭಿನಯದ ಯಾವ ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಕಾರಣ, ನಭಾಗೆ ಎಡಭುಜದಲ್ಲಿ ಪೆಟ್ಟಾಗಿತ್ತು. ಅವರಿಗೆ ಸರ್ಜರಿ ಸಹ ಆಗಿತ್ತು. ಆ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ನಭಾ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ.

ಕಳೆದ ವರ್ಷ ಕ್ರಮೇಣ ಚೇತರಿಸಿಕೊಂಡ ನಭಾ, ನಟಿಸುವುದನ್ನು ಮುಂದುವರೆಸಿದರು. ಅಪಘಾತದ ನಂತರ ಅವರು ನಟಿಸಿದ ಮೊದಲ ಚಿತ್ರ ‘ಡಾರ್ಲಿಂಗ್’ ಕಳೆದ ವಾರ ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗಿದೆ. ‘ಡಾರ್ಲಿಂಗ್’ ಹೆಸರಿನ ಈ ಚಿತ್ರದಲ್ಲಿ ಪ್ರಿಯದರ್ಶಿನಿ ಪುಲಿಕೊಂಡಗೆ ನಭಾ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಇದು ಒಂದೇ ಪಾತ್ರವಾದರೂ, ಏಳು ಅವತಾರಗಳಲ್ಲಿ ನಭಾ ಕಾಣಿಸಿಕೊಂಡಿದ್ದಾರೆ. ಮಲ್ಟಿಪಲ್‍ ಪರ್ಸನಾಲಿಟಿ ಡಿಸಾರ್ಡರ್ ಸಮಸ್ಯೆ ಇರುವ ನಾಯಕಿಯಾಗಿ ನಭಾ ನಟಿಸಿದ್ದು, ಏಳು ವಿಭಿನ್ನ ಶೈಲಿಯಲ್ಲಿ ನಟಿಸಿದ್ದಾರೆ. ನಭಾ ನಟನೆಗೆ ಇದೀಗ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಂದಹಾಗೆ, ಇದಲ್ಲೆ ‘ಸ್ವಯಂಭು’ ಎಂಬ ಇನ್ನೊಂದು ಚಿತ್ರದಲ್ಲೂ ನಭಾ ನಟಿಸುತ್ತಿದ್ದಾರೆ. ‘ಕಾರ್ತಿಕೇಯ’ ಖ್ಯಾರಿಯ ನಿಖಿಲ್‍ ಸಿದ್ಧಾರ್ಥ್‍ ಅಭಿನಯದ ಈ ಚಿತ್ರವು ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಷ್ಟೇ ಅಲ್ಲ, ನಿಖಿಲ್‍ ವೃತ್ತಿಜೀವನದಲ್ಲೇ ಅತ್ಯಮತ ದೊಡ್ಡ ಬಜೆಟ್‍ನ ಚಿತ್ರವಾಗಿದೆ. ಇದಲ್ಲದೆ, ಇನ್ನೊಂದಿಷ್ಟು ಚಿತ್ರಗಳಲ್ಲಿ ನಭಾ ಹೆಸರು ಕೇಳಿಬರುತ್ತಿದ್ದು, ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿದ್ದಾರೆ ನಭಾ.

ಭೂಮಿಕಾ

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

7 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

7 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

7 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

7 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

7 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

7 hours ago