ಮನರಂಜನೆ

ಹೊಸ ಚಿತ್ರದೊಂದಿಗೆ ಹೀರೋ ಮತ್ತು ಸಂಗೀತ ನಿರ್ದೇಶಕರಾದ ನಾಗಶೇಖರ್

ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್‍ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್‍ ಘೋಷಿಸಿದ್ದರು. ಆದರೆ, ಈ ಎರಡೂ ಚಿತ್ರಗಳು ಪ್ರಾರಂಭವಾಗಲಿಲ್ಲ. ಬದಲಿಗೆ, ನಾಗಶೇಖರ್‍ ಸದ್ಯಕ್ಕೆ ನಿರ್ದೇಶನವನ್ನು ಪಕ್ಕಕ್ಕಿಟ್ಟು, ಇದೀಗ ಹೀರೋ ಆಗಿದ್ದಾರೆ.

ಹೌದು, ನಾಗಶೇಖರ್‍ ಬಹಳ ವರ್ಷಗಳ ನಂತರ ಒಂದು ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಗೌರಿಪುತ್ರ’ ಎಂಬ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ನಿರ್ದೇಶನದಲ್ಲೇ ಹೆಚ್ಚಾಗಿ ತೊಡಗಿಸಿಕೊಂಡಿದ್ದ ನಾಗಶೇಖರ್‍, ಬಹಳ ದಿನಗಳ ನಂತರ ತೆರೆಮೇಲೆ ಬರುತ್ತಿದ್ದಾರೆ.

ನಾಗಶೇಖರ್‍ ಹೀರೋ ಆಗಿ ನಟಿಸುತ್ತಿರುವ ಚಿತ್ರದ ಹೆಸರೇ ವಿಭಿನ್ನವಾಗಿದೆ. ಚಿತ್ರದ ಹೆಸರು ‘ವಾರ್ತೆಗಳು – ಓದುತ್ತಿರುವವರು ಶಂಕರ್‍ ನಾಗ್‍’. ಶೀರ್ಷಿಕೆಯ ಮೂಲಕವೇ ಹೊಸ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ಜಿಯಾ ಉಲ್ಲಾ ಖಾನ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ನವೆಂಬರ್ ೧೧ರಂದು ನಾಗಶೇಖರ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಅದೇ ದಿನ ‘ವಾರ್ತೆಗಳು ಓದುತ್ತಿರುವವರು ಶಂಕರ್‌ನಾಗ್’ ಚಿತ್ರದ ಮುಹೂರ್ತ ನೆರವೇರಿದೆ. ರಾಜರಾಜೇಶ್ವರಿ ನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ನಾಗಶೇಖರ್ ಅವರ ತಾಯಿ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು.

‘ವಾರ್ತೆಗಳು – ಓದುತ್ತಿರುವವರು ಶಂಕರ್‍ ನಾಗ್‍’ ಚಿತ್ರವನ್ನು ಎ ರಾಮ್ ಚಿರು ಪ್ರೊಡಕ್ಷನ್ ಹೌಸ್ ಮೂಲಕ ರಾಮ್ ಚಿರು ನಿರ್ಮಿಸುತ್ತಿದ್ದಾರೆ. ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗುತ್ತಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ನಾಯಕನಾಗಿ ನಟಿಸುವುದರೊಂದಿಗೆ ನಾಗಶೇಖರ್ ಅವರೂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದು ಜತೆಗೆ ಸಂಗೀತ ನಿರ್ದೇಶಕನಾಗಿಯೂ ಕೆಲಸ ಮಾಡುತ್ತಿದ್ದಾರೆ. ಉಳಿದ ಕಲಾವಿದರು ಮತ್ತು ತಾಂತ್ರಿಕ ವರ್ಗದವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago