ಮನರಂಜನೆ

‘Q’ ಚಿತ್ರಕ್ಕೆ ಭಾಗ್ಯಶ್ರೀ ಮಗಳನ್ನು ಕನ್ನಡಕ್ಕೆ ಕರೆತಂದ ನಾಗಶೇಖರ್

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಮೊದಲು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು ನಾಗಶೇಖರ್‍. ಆದರೆ, ಚಿತ್ರದ ಚಿತ್ರೀಕರಣ ತಡವಾಗಿದ್ದರಿಂದ, ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಈ ಮಧ್ಯೆ, ನಾಗಶೇಖರ್ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿದ್ದಾರೆ. ಹಾಗೆ ನೋಡಿದರೆ, ಇದು ಹೊಸ ಚಿತ್ರವೇನಲ್ಲ, ಎರಡು ವರ್ಷಗಳ ಹಿಂದೆಯೇ ಅವರು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ‘Q’ ಎಂಬ ಚಿತ್ರವನ್ನು ನಿರ್ದೇಶಿಸುವುದಾಗಿ ಅವರು ಘೋಷಿಸಿದ್ದರು. ಕಾರಣಾಂತರಗಳಿಂದ ಚಿತ್ರ ಪ್ರಾರಂಭವಾಗಿಲ್ಲ. ಈಗ ಆ ಚಿತ್ರವನ್ನು ಅವರು ಪುನಃ ಕೈಗೆತ್ತಿಕೊಂಡಿದ್ದು, ಮುಂದಿನ ತಿಂಗಳು ಚಿತ್ರದ ಮುಹೂರ್ತ ನಡೆಯಲಿದೆ. ಈ ಚಿತ್ರವು ಪ್ಯಾನ್ ‍ಇಂಡಿಯಾ ಚಿತ್ರವಾಗಿ ಐದು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

‘Q’ ಚಿತ್ರವನ್ನು ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ ಈ ಚಿತ್ರವನ್ನು ಭಾವನಾ ರವಿ ಅವರು ಅರ್ಪಿಸುತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರದ ಮೂಲಕ ನಾಗಶೇಖರ್, ‘ಮೈನೆ ಪ್ಯಾರ್ ಕಿಯಾ’ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಅವಂತಿಕಾ ಇದಕ್ಕೂ ಮುನ್ನ ಹಿಂದಿಯಲ್ಲಿ ‘ಮಿಥ್ಯ’ ಎಂಬ ವೆಬ್‍ಸರಣಿಯಲ್ಲಿ ನಟಿಸಿದ್ದರು. ಈಗ ‘Q’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಅವಂತಿಕಾ ತಾಯಿ ಭಾಗ್ಯಶ್ರೀ ಸಹ ಕನ್ನಡಕ್ಕೆ ಹೊಸಬರೇನಲ್ಲ. ಹಲವು ವರ್ಷಗಳ ಹಿಂದೆ ಅವರು ಶಿವರಾಜಕುಮಾರ್‍ ಅಭಿನಯದ ‘ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಆ ನಂತರ ನಿಖಿಲ್‍ ಕುಮಾರ್‍ ಅಭಿನಯುದ ‘ಸೀತಾರಾಮ ಕಲ್ಯಾಣ’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಅವರ ಮಗಳು ‘Q’ ಚಿತ್ರದ ಮೂಲಕ ಕನ್ನಡಕ್ಕೆ ಬರುತ್ತಿದ್ದಾರೆ.

‘Q’ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್‍ ಸಂಭಾಷಣೆ ರಚಿಸಿದ್ದಾರೆ.

ಭೂಮಿಕಾ

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

8 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

9 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

9 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

12 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

12 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

13 hours ago