ಮನರಂಜನೆ

‘Q’ ಚಿತ್ರಕ್ಕೆ ಭಾಗ್ಯಶ್ರೀ ಮಗಳನ್ನು ಕನ್ನಡಕ್ಕೆ ಕರೆತಂದ ನಾಗಶೇಖರ್

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಮೊದಲು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು ನಾಗಶೇಖರ್‍. ಆದರೆ, ಚಿತ್ರದ ಚಿತ್ರೀಕರಣ ತಡವಾಗಿದ್ದರಿಂದ, ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಈ ಮಧ್ಯೆ, ನಾಗಶೇಖರ್ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿದ್ದಾರೆ. ಹಾಗೆ ನೋಡಿದರೆ, ಇದು ಹೊಸ ಚಿತ್ರವೇನಲ್ಲ, ಎರಡು ವರ್ಷಗಳ ಹಿಂದೆಯೇ ಅವರು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ‘Q’ ಎಂಬ ಚಿತ್ರವನ್ನು ನಿರ್ದೇಶಿಸುವುದಾಗಿ ಅವರು ಘೋಷಿಸಿದ್ದರು. ಕಾರಣಾಂತರಗಳಿಂದ ಚಿತ್ರ ಪ್ರಾರಂಭವಾಗಿಲ್ಲ. ಈಗ ಆ ಚಿತ್ರವನ್ನು ಅವರು ಪುನಃ ಕೈಗೆತ್ತಿಕೊಂಡಿದ್ದು, ಮುಂದಿನ ತಿಂಗಳು ಚಿತ್ರದ ಮುಹೂರ್ತ ನಡೆಯಲಿದೆ. ಈ ಚಿತ್ರವು ಪ್ಯಾನ್ ‍ಇಂಡಿಯಾ ಚಿತ್ರವಾಗಿ ಐದು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

‘Q’ ಚಿತ್ರವನ್ನು ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ ಈ ಚಿತ್ರವನ್ನು ಭಾವನಾ ರವಿ ಅವರು ಅರ್ಪಿಸುತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರದ ಮೂಲಕ ನಾಗಶೇಖರ್, ‘ಮೈನೆ ಪ್ಯಾರ್ ಕಿಯಾ’ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಅವಂತಿಕಾ ಇದಕ್ಕೂ ಮುನ್ನ ಹಿಂದಿಯಲ್ಲಿ ‘ಮಿಥ್ಯ’ ಎಂಬ ವೆಬ್‍ಸರಣಿಯಲ್ಲಿ ನಟಿಸಿದ್ದರು. ಈಗ ‘Q’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಅವಂತಿಕಾ ತಾಯಿ ಭಾಗ್ಯಶ್ರೀ ಸಹ ಕನ್ನಡಕ್ಕೆ ಹೊಸಬರೇನಲ್ಲ. ಹಲವು ವರ್ಷಗಳ ಹಿಂದೆ ಅವರು ಶಿವರಾಜಕುಮಾರ್‍ ಅಭಿನಯದ ‘ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಆ ನಂತರ ನಿಖಿಲ್‍ ಕುಮಾರ್‍ ಅಭಿನಯುದ ‘ಸೀತಾರಾಮ ಕಲ್ಯಾಣ’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಅವರ ಮಗಳು ‘Q’ ಚಿತ್ರದ ಮೂಲಕ ಕನ್ನಡಕ್ಕೆ ಬರುತ್ತಿದ್ದಾರೆ.

‘Q’ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್‍ ಸಂಭಾಷಣೆ ರಚಿಸಿದ್ದಾರೆ.

ಭೂಮಿಕಾ

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

1 hour ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

3 hours ago