ಮನರಂಜನೆ

‘Q’ ಚಿತ್ರಕ್ಕೆ ಭಾಗ್ಯಶ್ರೀ ಮಗಳನ್ನು ಕನ್ನಡಕ್ಕೆ ಕರೆತಂದ ನಾಗಶೇಖರ್

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಮೊದಲು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು ನಾಗಶೇಖರ್‍. ಆದರೆ, ಚಿತ್ರದ ಚಿತ್ರೀಕರಣ ತಡವಾಗಿದ್ದರಿಂದ, ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಈ ಮಧ್ಯೆ, ನಾಗಶೇಖರ್ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿದ್ದಾರೆ. ಹಾಗೆ ನೋಡಿದರೆ, ಇದು ಹೊಸ ಚಿತ್ರವೇನಲ್ಲ, ಎರಡು ವರ್ಷಗಳ ಹಿಂದೆಯೇ ಅವರು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ‘Q’ ಎಂಬ ಚಿತ್ರವನ್ನು ನಿರ್ದೇಶಿಸುವುದಾಗಿ ಅವರು ಘೋಷಿಸಿದ್ದರು. ಕಾರಣಾಂತರಗಳಿಂದ ಚಿತ್ರ ಪ್ರಾರಂಭವಾಗಿಲ್ಲ. ಈಗ ಆ ಚಿತ್ರವನ್ನು ಅವರು ಪುನಃ ಕೈಗೆತ್ತಿಕೊಂಡಿದ್ದು, ಮುಂದಿನ ತಿಂಗಳು ಚಿತ್ರದ ಮುಹೂರ್ತ ನಡೆಯಲಿದೆ. ಈ ಚಿತ್ರವು ಪ್ಯಾನ್ ‍ಇಂಡಿಯಾ ಚಿತ್ರವಾಗಿ ಐದು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

‘Q’ ಚಿತ್ರವನ್ನು ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ ಈ ಚಿತ್ರವನ್ನು ಭಾವನಾ ರವಿ ಅವರು ಅರ್ಪಿಸುತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರದ ಮೂಲಕ ನಾಗಶೇಖರ್, ‘ಮೈನೆ ಪ್ಯಾರ್ ಕಿಯಾ’ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಅವಂತಿಕಾ ಇದಕ್ಕೂ ಮುನ್ನ ಹಿಂದಿಯಲ್ಲಿ ‘ಮಿಥ್ಯ’ ಎಂಬ ವೆಬ್‍ಸರಣಿಯಲ್ಲಿ ನಟಿಸಿದ್ದರು. ಈಗ ‘Q’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಅವಂತಿಕಾ ತಾಯಿ ಭಾಗ್ಯಶ್ರೀ ಸಹ ಕನ್ನಡಕ್ಕೆ ಹೊಸಬರೇನಲ್ಲ. ಹಲವು ವರ್ಷಗಳ ಹಿಂದೆ ಅವರು ಶಿವರಾಜಕುಮಾರ್‍ ಅಭಿನಯದ ‘ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಆ ನಂತರ ನಿಖಿಲ್‍ ಕುಮಾರ್‍ ಅಭಿನಯುದ ‘ಸೀತಾರಾಮ ಕಲ್ಯಾಣ’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಅವರ ಮಗಳು ‘Q’ ಚಿತ್ರದ ಮೂಲಕ ಕನ್ನಡಕ್ಕೆ ಬರುತ್ತಿದ್ದಾರೆ.

‘Q’ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್‍ ಸಂಭಾಷಣೆ ರಚಿಸಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago