ಮನರಂಜನೆ

25 ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಮೇಶ್ ಅರವಿಂದ್‍

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್‍ ಅರವಿಂದ್‍ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್‍, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ ಚಿತ್ರಗಳು ತನ್ನದೇ ಕಾರಣಗಳಿಗೆ ಬಹಳ ಪ್ರಾಮುಖ್ಯತೆ ಪಡೆದಿವೆ. ಈ ಜೋಡಿ ಮೊದಲಿಗೆ ಜೊತೆಯಾಗಿ ಕೆಲಸ ಮಾಡಿದ್ದು ‘ಅಮೇರಿಕಾ ಅಮೇರಿಕಾ’ ಚಿತ್ರದಲ್ಲಿ. ಆ ನಂತರ ‘ಹೂಮಳೆ’ ಚಿತ್ರದಲ್ಲೂ ಈ ಜೋಡಿ ಜೊತೆಗೆ ಕೆಲಸ ಮಾಡಿತ್ತು.

ಈಗ್ಯಾಕೆ ಈ ಜೋಡಿಯ ಕಥೆ ಎಂದರೆ, ಬಹಳ ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಸಿನಿಮಾದಲ್ಲಿ ರಮೇಶ್ ಅರವಿಂದ್ ನಟಿಸಿದ್ದಾರೆ. ನಿರೂಪ್‍ ಭಂಡಾರಿ, ಪೃಥ್ವಿ ಅಂಬರ್ ಮತ್ತು ಶಾನ್ವಿ ಶ್ರೀವಾತ್ಸವ್‍ ಅಭಿನಯದಲ್ಲಿ ನಾಗತಿಹಳ್ಳಿ ಒಂದು ಚಿತ್ರ ನಿರ್ದೇಶಿಸಿರುವುದು ಗೊತ್ತೇ ಇದೆ. ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಚಿತ್ರಕ್ಕೆ ‘ಅಮೇರಿಕಾ ಅಮೇರಿಕಾ 2’ ಎಂಬ ಹೆಸರಿಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ರಮೇಶ್‍ ಅರವಿಂದ್‍ ಒಂದು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

1997ರಲ್ಲಿ ಬಿಡುಗಡೆಯಾದ ‘ಅಮೇರಿಕಾ ಅಮೇರಿಕಾ’ ಚಿತ್ರವು ಅಮೇರಿಕಾದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಈ ಚಿತ್ರದ ಮೂಲಕ ಮನೋಮೂರ್ತಿ ಸಂಗೀತ ನಿರ್ದೇಶಕರಾಗಿದ್ದರು. ಅನಿವಾಸಿ ಭಾರತೀಯರ ನೋವು-ನಲಿವನ್ನು ಈ ಚಿತ್ರ ಅದ್ಭುತವಾಗಿ ಹಿಡಿದಿಟ್ಟಿತ್ತು. ‘ಅಮೇರಿಕಾ ಅಮೇರಿಕಾ 2’ಗೂ ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅಮೇರಿಕಾದಲ್ಲಿ ನೆಲೆಸಿರುವ ಇವತ್ತಿನ ತಲೆಮಾರಿನವರ ಕುರಿತಾದ ಚಿತ್ರ ಇದಾಗಿದೆ. ಸಹನಾ ವಿಜಯಕುಮಾರ್ ಅವರ ‘ಕ್ಷಮೆ’ ಕಾದಂಬರಿಯನ್ನು ಈ ಚಿತ್ರ ಆಧರಿಸಿದೆ. ಈ ಚಿತ್ರದಲ್ಲಿ ರಮೇಶ್‍ ಅವರ ಪಾತ್ರವೇನು ಎಂಬ ವಿಷಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ, ಚಿತ್ರದ ನಿರೂಪಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಲಾಗಿದೆ.

ಈ ಚಿತ್ರವನ್ನು ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಮನೋಮೂರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಕೆಲವೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

4 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

4 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

4 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

5 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

7 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

8 hours ago