nagathihalli chandrasheka
ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್ ಅರವಿಂದ್ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ ಚಿತ್ರಗಳು ತನ್ನದೇ ಕಾರಣಗಳಿಗೆ ಬಹಳ ಪ್ರಾಮುಖ್ಯತೆ ಪಡೆದಿವೆ. ಈ ಜೋಡಿ ಮೊದಲಿಗೆ ಜೊತೆಯಾಗಿ ಕೆಲಸ ಮಾಡಿದ್ದು ‘ಅಮೇರಿಕಾ ಅಮೇರಿಕಾ’ ಚಿತ್ರದಲ್ಲಿ. ಆ ನಂತರ ‘ಹೂಮಳೆ’ ಚಿತ್ರದಲ್ಲೂ ಈ ಜೋಡಿ ಜೊತೆಗೆ ಕೆಲಸ ಮಾಡಿತ್ತು.
ಈಗ್ಯಾಕೆ ಈ ಜೋಡಿಯ ಕಥೆ ಎಂದರೆ, ಬಹಳ ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಸಿನಿಮಾದಲ್ಲಿ ರಮೇಶ್ ಅರವಿಂದ್ ನಟಿಸಿದ್ದಾರೆ. ನಿರೂಪ್ ಭಂಡಾರಿ, ಪೃಥ್ವಿ ಅಂಬರ್ ಮತ್ತು ಶಾನ್ವಿ ಶ್ರೀವಾತ್ಸವ್ ಅಭಿನಯದಲ್ಲಿ ನಾಗತಿಹಳ್ಳಿ ಒಂದು ಚಿತ್ರ ನಿರ್ದೇಶಿಸಿರುವುದು ಗೊತ್ತೇ ಇದೆ. ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಚಿತ್ರಕ್ಕೆ ‘ಅಮೇರಿಕಾ ಅಮೇರಿಕಾ 2’ ಎಂಬ ಹೆಸರಿಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ರಮೇಶ್ ಅರವಿಂದ್ ಒಂದು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
1997ರಲ್ಲಿ ಬಿಡುಗಡೆಯಾದ ‘ಅಮೇರಿಕಾ ಅಮೇರಿಕಾ’ ಚಿತ್ರವು ಅಮೇರಿಕಾದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಈ ಚಿತ್ರದ ಮೂಲಕ ಮನೋಮೂರ್ತಿ ಸಂಗೀತ ನಿರ್ದೇಶಕರಾಗಿದ್ದರು. ಅನಿವಾಸಿ ಭಾರತೀಯರ ನೋವು-ನಲಿವನ್ನು ಈ ಚಿತ್ರ ಅದ್ಭುತವಾಗಿ ಹಿಡಿದಿಟ್ಟಿತ್ತು. ‘ಅಮೇರಿಕಾ ಅಮೇರಿಕಾ 2’ಗೂ ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅಮೇರಿಕಾದಲ್ಲಿ ನೆಲೆಸಿರುವ ಇವತ್ತಿನ ತಲೆಮಾರಿನವರ ಕುರಿತಾದ ಚಿತ್ರ ಇದಾಗಿದೆ. ಸಹನಾ ವಿಜಯಕುಮಾರ್ ಅವರ ‘ಕ್ಷಮೆ’ ಕಾದಂಬರಿಯನ್ನು ಈ ಚಿತ್ರ ಆಧರಿಸಿದೆ. ಈ ಚಿತ್ರದಲ್ಲಿ ರಮೇಶ್ ಅವರ ಪಾತ್ರವೇನು ಎಂಬ ವಿಷಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ, ಚಿತ್ರದ ನಿರೂಪಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಲಾಗಿದೆ.
ಈ ಚಿತ್ರವನ್ನು ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಮನೋಮೂರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಕೆಲವೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…