ಮನರಂಜನೆ

25 ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಮೇಶ್ ಅರವಿಂದ್‍

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್‍ ಅರವಿಂದ್‍ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್‍, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ ಚಿತ್ರಗಳು ತನ್ನದೇ ಕಾರಣಗಳಿಗೆ ಬಹಳ ಪ್ರಾಮುಖ್ಯತೆ ಪಡೆದಿವೆ. ಈ ಜೋಡಿ ಮೊದಲಿಗೆ ಜೊತೆಯಾಗಿ ಕೆಲಸ ಮಾಡಿದ್ದು ‘ಅಮೇರಿಕಾ ಅಮೇರಿಕಾ’ ಚಿತ್ರದಲ್ಲಿ. ಆ ನಂತರ ‘ಹೂಮಳೆ’ ಚಿತ್ರದಲ್ಲೂ ಈ ಜೋಡಿ ಜೊತೆಗೆ ಕೆಲಸ ಮಾಡಿತ್ತು.

ಈಗ್ಯಾಕೆ ಈ ಜೋಡಿಯ ಕಥೆ ಎಂದರೆ, ಬಹಳ ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಸಿನಿಮಾದಲ್ಲಿ ರಮೇಶ್ ಅರವಿಂದ್ ನಟಿಸಿದ್ದಾರೆ. ನಿರೂಪ್‍ ಭಂಡಾರಿ, ಪೃಥ್ವಿ ಅಂಬರ್ ಮತ್ತು ಶಾನ್ವಿ ಶ್ರೀವಾತ್ಸವ್‍ ಅಭಿನಯದಲ್ಲಿ ನಾಗತಿಹಳ್ಳಿ ಒಂದು ಚಿತ್ರ ನಿರ್ದೇಶಿಸಿರುವುದು ಗೊತ್ತೇ ಇದೆ. ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಚಿತ್ರಕ್ಕೆ ‘ಅಮೇರಿಕಾ ಅಮೇರಿಕಾ 2’ ಎಂಬ ಹೆಸರಿಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ರಮೇಶ್‍ ಅರವಿಂದ್‍ ಒಂದು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

1997ರಲ್ಲಿ ಬಿಡುಗಡೆಯಾದ ‘ಅಮೇರಿಕಾ ಅಮೇರಿಕಾ’ ಚಿತ್ರವು ಅಮೇರಿಕಾದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಈ ಚಿತ್ರದ ಮೂಲಕ ಮನೋಮೂರ್ತಿ ಸಂಗೀತ ನಿರ್ದೇಶಕರಾಗಿದ್ದರು. ಅನಿವಾಸಿ ಭಾರತೀಯರ ನೋವು-ನಲಿವನ್ನು ಈ ಚಿತ್ರ ಅದ್ಭುತವಾಗಿ ಹಿಡಿದಿಟ್ಟಿತ್ತು. ‘ಅಮೇರಿಕಾ ಅಮೇರಿಕಾ 2’ಗೂ ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅಮೇರಿಕಾದಲ್ಲಿ ನೆಲೆಸಿರುವ ಇವತ್ತಿನ ತಲೆಮಾರಿನವರ ಕುರಿತಾದ ಚಿತ್ರ ಇದಾಗಿದೆ. ಸಹನಾ ವಿಜಯಕುಮಾರ್ ಅವರ ‘ಕ್ಷಮೆ’ ಕಾದಂಬರಿಯನ್ನು ಈ ಚಿತ್ರ ಆಧರಿಸಿದೆ. ಈ ಚಿತ್ರದಲ್ಲಿ ರಮೇಶ್‍ ಅವರ ಪಾತ್ರವೇನು ಎಂಬ ವಿಷಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ, ಚಿತ್ರದ ನಿರೂಪಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಲಾಗಿದೆ.

ಈ ಚಿತ್ರವನ್ನು ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಮನೋಮೂರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಕೆಲವೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

5 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

6 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

7 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

7 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

8 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

11 hours ago