ಮನರಂಜನೆ

ʼನಾಗವಲ್ಲಿ ಬಂಗಲೆ’ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು

ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್‍’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ ಮಲಯಾಳಂ ಚಿತ್ರರಂಗದಲ್ಲಷ್ಟೇ ಅಲ್ಲ, ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಜನಪ್ರಿಯವಾಗಿವೆ. ಕನ್ನಡದ ‘ಆಪ್ತಮಿತ್ರ’ ಮತ್ತು ‘ಆಪ್ತರಕ್ಷಕ’ ಚಿತ್ರಗಳಲ್ಲಿ ನಾಗವಲ್ಲಿ ಎಂಬ ಹೆಸರಿನ ಪಾತ್ರಗಳು ಬರುವುದರ ಜೊತೆಗೆ, ಆ ಹೆಸರಿನ ಚಿತ್ರ ಸಹ ಕೆಲವು ವರ್ಷಗಳ ಹಿಂದೆ ಬಂದಿತ್ತು.

ಈಗ ಕನ್ನಡದಲ್ಲಿ ‘ನಾಗವಲ್ಲಿ ಬಂಗಲೆ’ ಎಂಬ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ನಿರ್ಮಾಣವಾಗಿದೆ. ಹೆಸರು ಕೇಳಿದರೆ ಇದೊಂದು ಹಾರರ್ ಚಿತ್ರ ಎಂದನಿಸುವ ಸಾಧ್ಯತೆ ಇದೆ. ಇದು ಹಾರರ್‍ ಚಿತ್ರವಾ? ಈ ವಿಷಯವನ್ನು ಚಿತ್ರತಂಡವು ಬಹಿರಂಗಗೊಳಿಸಿಲ್ಲ. ಸದ್ಯಕ್ಕೆ ಚಿತ್ರ ಯಾವ ಜಾನರ್‍ಗೆ ಸೇರಿದ್ದು ಎಂಬ ವಿಷಯವನ್ನು ಮುಚ್ಚಿಟ್ಟಿದೆ. ಮಿಕ್ಕಂತೆ ಒಂದಿಷ್ಟು ವಿಷಯಗಳನ್ನು ಬಹಿರಂಗಗೊಳಿಸಿದೆ.

ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಎಂಬ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ‘ನಾಗವಲ್ಲಿ ಬಂಗಲೆ’ಯನ್ನು ಪ್ರವೇಶಿಸುತ್ತಾರೆ. ಈ ಆರು ಪಾತ್ರಗಳ ಜೊತೆಗೆ ಮತ್ತೊಂದು ವಿಶೇಷ ಪಾತ್ರ ಸಹ ಇದೆ. ಈ ಆರು ಪಾತ್ರಗಳ ಪ್ರವೇಶದ ನಂತರ ‘ನಾಗವಲ್ಲಿ ಬಂಗಲೆ’ಯಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಈ ಚಿತ್ರದ ಕಥೆ.

‘ನಾಗವಲ್ಲಿ ಬಂಗಲೆ’ ಚಿತ್ರದ ಚಿತ್ರೀಕರಣ ಮತ್ತು ಇತರೆ ಕೆಲಸಗಳು ಮುಗಿದಿವೆ. ಅಷ್ಟೇ ಅಲ್ಲ, ಚಿತ್ರದ ಸೆನ್ಸಾರ್‍ ಸಹ ಆಗಿದೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ‘U/A’ ಪ್ರಮಾಣ ಪತ್ರ ನೀಡಿದೆ. ಬೆಂಗಳೂರು, ನೆಲಮಂಗಲದ ಆಸುಪಾಸಿನಲ್ಲಿ ಚಿತ್ರೀಕರಣವಾಗಿದೆ.

ಹಂಸ ವಿಷನ್ಸ್ ಲಾಂಛನದಲ್ಲಿ ನೆ.ಲ ಮಹೇಶ್ ಮತ್ತು ನೇವಿ ಮಂಜು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕವಿ ರಾಜೇಶ್‍ ನಿರ್ದೇಶಿಸಿರುವ ಈ ಚಿತ್ರಕ್ಕೆ ರೋಹನ್ ದೇಸಾಯಿ ಸಂಗೀತವಿದೆ. ಜೆ.ಎಂ. ಪ್ರಹ್ಲಾದ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಫೆಬ್ರುವರಿಯಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿರುವ ಈ ಚಿತ್ರದಲ್ಲಿ ನೆ.ಲ. ನರೇಂದ್ರಬಾಬು,‌ ತೇಜಸ್ವಿನಿ, ನೇವಿ ಮಂಜು, ರೂಪಶ್ರೀ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago