ಮನರಂಜನೆ

ʼನಾಗವಲ್ಲಿ ಬಂಗಲೆ’ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು

ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್‍’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ ಮಲಯಾಳಂ ಚಿತ್ರರಂಗದಲ್ಲಷ್ಟೇ ಅಲ್ಲ, ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಜನಪ್ರಿಯವಾಗಿವೆ. ಕನ್ನಡದ ‘ಆಪ್ತಮಿತ್ರ’ ಮತ್ತು ‘ಆಪ್ತರಕ್ಷಕ’ ಚಿತ್ರಗಳಲ್ಲಿ ನಾಗವಲ್ಲಿ ಎಂಬ ಹೆಸರಿನ ಪಾತ್ರಗಳು ಬರುವುದರ ಜೊತೆಗೆ, ಆ ಹೆಸರಿನ ಚಿತ್ರ ಸಹ ಕೆಲವು ವರ್ಷಗಳ ಹಿಂದೆ ಬಂದಿತ್ತು.

ಈಗ ಕನ್ನಡದಲ್ಲಿ ‘ನಾಗವಲ್ಲಿ ಬಂಗಲೆ’ ಎಂಬ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ನಿರ್ಮಾಣವಾಗಿದೆ. ಹೆಸರು ಕೇಳಿದರೆ ಇದೊಂದು ಹಾರರ್ ಚಿತ್ರ ಎಂದನಿಸುವ ಸಾಧ್ಯತೆ ಇದೆ. ಇದು ಹಾರರ್‍ ಚಿತ್ರವಾ? ಈ ವಿಷಯವನ್ನು ಚಿತ್ರತಂಡವು ಬಹಿರಂಗಗೊಳಿಸಿಲ್ಲ. ಸದ್ಯಕ್ಕೆ ಚಿತ್ರ ಯಾವ ಜಾನರ್‍ಗೆ ಸೇರಿದ್ದು ಎಂಬ ವಿಷಯವನ್ನು ಮುಚ್ಚಿಟ್ಟಿದೆ. ಮಿಕ್ಕಂತೆ ಒಂದಿಷ್ಟು ವಿಷಯಗಳನ್ನು ಬಹಿರಂಗಗೊಳಿಸಿದೆ.

ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಎಂಬ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ‘ನಾಗವಲ್ಲಿ ಬಂಗಲೆ’ಯನ್ನು ಪ್ರವೇಶಿಸುತ್ತಾರೆ. ಈ ಆರು ಪಾತ್ರಗಳ ಜೊತೆಗೆ ಮತ್ತೊಂದು ವಿಶೇಷ ಪಾತ್ರ ಸಹ ಇದೆ. ಈ ಆರು ಪಾತ್ರಗಳ ಪ್ರವೇಶದ ನಂತರ ‘ನಾಗವಲ್ಲಿ ಬಂಗಲೆ’ಯಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಈ ಚಿತ್ರದ ಕಥೆ.

‘ನಾಗವಲ್ಲಿ ಬಂಗಲೆ’ ಚಿತ್ರದ ಚಿತ್ರೀಕರಣ ಮತ್ತು ಇತರೆ ಕೆಲಸಗಳು ಮುಗಿದಿವೆ. ಅಷ್ಟೇ ಅಲ್ಲ, ಚಿತ್ರದ ಸೆನ್ಸಾರ್‍ ಸಹ ಆಗಿದೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ‘U/A’ ಪ್ರಮಾಣ ಪತ್ರ ನೀಡಿದೆ. ಬೆಂಗಳೂರು, ನೆಲಮಂಗಲದ ಆಸುಪಾಸಿನಲ್ಲಿ ಚಿತ್ರೀಕರಣವಾಗಿದೆ.

ಹಂಸ ವಿಷನ್ಸ್ ಲಾಂಛನದಲ್ಲಿ ನೆ.ಲ ಮಹೇಶ್ ಮತ್ತು ನೇವಿ ಮಂಜು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕವಿ ರಾಜೇಶ್‍ ನಿರ್ದೇಶಿಸಿರುವ ಈ ಚಿತ್ರಕ್ಕೆ ರೋಹನ್ ದೇಸಾಯಿ ಸಂಗೀತವಿದೆ. ಜೆ.ಎಂ. ಪ್ರಹ್ಲಾದ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಫೆಬ್ರುವರಿಯಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿರುವ ಈ ಚಿತ್ರದಲ್ಲಿ ನೆ.ಲ. ನರೇಂದ್ರಬಾಬು,‌ ತೇಜಸ್ವಿನಿ, ನೇವಿ ಮಂಜು, ರೂಪಶ್ರೀ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago