Fraud Rishi
ಒಂದು ಕಾಲಕ್ಕೆ ಸಿಕ್ಕಾಪಟ್ಟೆ ವಿವಾದಕ್ಕೆ ಸಿಲುಕಿದವರು ಋಷಿ. ವಿವಾದಗಳ ಜೊತೆಗೆ ‘ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ …’ ಎಂಬ ಹಾಡು ಬರೆದು ಜನಪ್ರಿಯರೂ ಆಗಿದ್ದರು. ‘ಸೂರ್ಯ ದಿ ಗ್ರೇಟ್’, ‘ಕೊಟ್ಲಲ್ಲಪ್ಪೋ ಕೈ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಋಷಿ, ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವೇ ಇದ್ದರು. ಇದೀಗ ಅವರು ಹೊಸ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು ‘ಫ್ರಾಡ್ ಋಷಿ’. ಈ ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಸಾಮಾನ್ಯವಾಗಿ ಚಿತ್ರೀಕರಣ ಪೂರ್ಣವಾದ ಮೇಲೆ ಹಾಡು ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ ಆನಂತರ ಚಿತ್ರೀಕರಣ ಆರಂಭಿಸುತ್ತಿರುವುದು ಈ ಚಿತ್ರದ ವಿಶೇಷ.
‘ಫ್ರಾಡ್ ಋಷಿ ಚಿತ್ರದ ಕುರಿತು ಮಾತನಾಡುವ ಋಷಿ, ‘ಇದೊಂದು ಕಾಮಿಡಿ ಜಾನರ್ನ ಚಿತ್ರ. ಜೊತೆಗೆ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಚಿತ್ರವೂ ಹೌದು. ಚಿತ್ರದಲ್ಲಿ ಏಳು ಹಾಡುಗಳಿವೆ. ಅದರಲ್ಲಿ ನಾಲ್ಕು ಹಾಡುಗಳನ್ನು ಬಿಡುಗಡೆ ಮಾಡಿ, ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸುತ್ತೇವೆ.
ನಾನೇ ನಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ ಬೆಂಬಲ ನೀಡುತ್ತಿದ್ದಾರೆ. ನಿರ್ದೇಶನ, ಕಥೆ, ಚಿತ್ರಕಥೆ, ಗೀತರಚನೆ, ಸಂಭಾಷಣೆ ಕೂಡ ನನ್ನದೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಅಭಿನಯಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಕಥೆಯೇ ನಾಯಕ. ಚಿತ್ರದಲ್ಲಿ ಮೂವರು ನಾಯಕಿಯರು ಇರುತ್ತಾರೆ. ಅಂದುಕೊಂಡ ಹಾಗೆ ಆದರೆ ಇದೇ ಡಿಸೆಂಬರ್ ಒಳಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದರು. ‘ಫ್ರಾಡ್ ಋಷಿ’ ಚಿತ್ರಕ್ಕೆ ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಶಂಕರ್ ಛಾಯಾಗ್ರಹಣ ಹಾಗೂ ಸುರೇಶ್ ಸಂಕಲನ ಈ ಚಿತ್ರಕ್ಕಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…