Fraud Rishi
ಒಂದು ಕಾಲಕ್ಕೆ ಸಿಕ್ಕಾಪಟ್ಟೆ ವಿವಾದಕ್ಕೆ ಸಿಲುಕಿದವರು ಋಷಿ. ವಿವಾದಗಳ ಜೊತೆಗೆ ‘ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ …’ ಎಂಬ ಹಾಡು ಬರೆದು ಜನಪ್ರಿಯರೂ ಆಗಿದ್ದರು. ‘ಸೂರ್ಯ ದಿ ಗ್ರೇಟ್’, ‘ಕೊಟ್ಲಲ್ಲಪ್ಪೋ ಕೈ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಋಷಿ, ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವೇ ಇದ್ದರು. ಇದೀಗ ಅವರು ಹೊಸ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು ‘ಫ್ರಾಡ್ ಋಷಿ’. ಈ ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಸಾಮಾನ್ಯವಾಗಿ ಚಿತ್ರೀಕರಣ ಪೂರ್ಣವಾದ ಮೇಲೆ ಹಾಡು ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ ಆನಂತರ ಚಿತ್ರೀಕರಣ ಆರಂಭಿಸುತ್ತಿರುವುದು ಈ ಚಿತ್ರದ ವಿಶೇಷ.
‘ಫ್ರಾಡ್ ಋಷಿ ಚಿತ್ರದ ಕುರಿತು ಮಾತನಾಡುವ ಋಷಿ, ‘ಇದೊಂದು ಕಾಮಿಡಿ ಜಾನರ್ನ ಚಿತ್ರ. ಜೊತೆಗೆ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಚಿತ್ರವೂ ಹೌದು. ಚಿತ್ರದಲ್ಲಿ ಏಳು ಹಾಡುಗಳಿವೆ. ಅದರಲ್ಲಿ ನಾಲ್ಕು ಹಾಡುಗಳನ್ನು ಬಿಡುಗಡೆ ಮಾಡಿ, ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸುತ್ತೇವೆ.
ನಾನೇ ನಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ ಬೆಂಬಲ ನೀಡುತ್ತಿದ್ದಾರೆ. ನಿರ್ದೇಶನ, ಕಥೆ, ಚಿತ್ರಕಥೆ, ಗೀತರಚನೆ, ಸಂಭಾಷಣೆ ಕೂಡ ನನ್ನದೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಅಭಿನಯಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಕಥೆಯೇ ನಾಯಕ. ಚಿತ್ರದಲ್ಲಿ ಮೂವರು ನಾಯಕಿಯರು ಇರುತ್ತಾರೆ. ಅಂದುಕೊಂಡ ಹಾಗೆ ಆದರೆ ಇದೇ ಡಿಸೆಂಬರ್ ಒಳಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದರು. ‘ಫ್ರಾಡ್ ಋಷಿ’ ಚಿತ್ರಕ್ಕೆ ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಶಂಕರ್ ಛಾಯಾಗ್ರಹಣ ಹಾಗೂ ಸುರೇಶ್ ಸಂಕಲನ ಈ ಚಿತ್ರಕ್ಕಿದೆ.
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…