Fraud Rishi
ಒಂದು ಕಾಲಕ್ಕೆ ಸಿಕ್ಕಾಪಟ್ಟೆ ವಿವಾದಕ್ಕೆ ಸಿಲುಕಿದವರು ಋಷಿ. ವಿವಾದಗಳ ಜೊತೆಗೆ ‘ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ …’ ಎಂಬ ಹಾಡು ಬರೆದು ಜನಪ್ರಿಯರೂ ಆಗಿದ್ದರು. ‘ಸೂರ್ಯ ದಿ ಗ್ರೇಟ್’, ‘ಕೊಟ್ಲಲ್ಲಪ್ಪೋ ಕೈ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಋಷಿ, ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವೇ ಇದ್ದರು. ಇದೀಗ ಅವರು ಹೊಸ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು ‘ಫ್ರಾಡ್ ಋಷಿ’. ಈ ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಸಾಮಾನ್ಯವಾಗಿ ಚಿತ್ರೀಕರಣ ಪೂರ್ಣವಾದ ಮೇಲೆ ಹಾಡು ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ ಆನಂತರ ಚಿತ್ರೀಕರಣ ಆರಂಭಿಸುತ್ತಿರುವುದು ಈ ಚಿತ್ರದ ವಿಶೇಷ.
‘ಫ್ರಾಡ್ ಋಷಿ ಚಿತ್ರದ ಕುರಿತು ಮಾತನಾಡುವ ಋಷಿ, ‘ಇದೊಂದು ಕಾಮಿಡಿ ಜಾನರ್ನ ಚಿತ್ರ. ಜೊತೆಗೆ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಚಿತ್ರವೂ ಹೌದು. ಚಿತ್ರದಲ್ಲಿ ಏಳು ಹಾಡುಗಳಿವೆ. ಅದರಲ್ಲಿ ನಾಲ್ಕು ಹಾಡುಗಳನ್ನು ಬಿಡುಗಡೆ ಮಾಡಿ, ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸುತ್ತೇವೆ.
ನಾನೇ ನಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ ಬೆಂಬಲ ನೀಡುತ್ತಿದ್ದಾರೆ. ನಿರ್ದೇಶನ, ಕಥೆ, ಚಿತ್ರಕಥೆ, ಗೀತರಚನೆ, ಸಂಭಾಷಣೆ ಕೂಡ ನನ್ನದೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಅಭಿನಯಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಕಥೆಯೇ ನಾಯಕ. ಚಿತ್ರದಲ್ಲಿ ಮೂವರು ನಾಯಕಿಯರು ಇರುತ್ತಾರೆ. ಅಂದುಕೊಂಡ ಹಾಗೆ ಆದರೆ ಇದೇ ಡಿಸೆಂಬರ್ ಒಳಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದರು. ‘ಫ್ರಾಡ್ ಋಷಿ’ ಚಿತ್ರಕ್ಕೆ ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಶಂಕರ್ ಛಾಯಾಗ್ರಹಣ ಹಾಗೂ ಸುರೇಶ್ ಸಂಕಲನ ಈ ಚಿತ್ರಕ್ಕಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…